ಬಂಟ್ವಾಳ

ಕಾಲೇಜಿಗೆ ಮೂಲಸೌಕರ್ಯ ಕೊರತೆ: ಎಬಿವಿಪಿ ಪ್ರತಿಭಟನೆ

ಬಂಟ್ವಾಳ ಕಾಮಾಜೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ವತಿಯಿಂದ ಪ್ರತಿಭಟನೆ ನಡೆಯಿತು.

ಜಾಹೀರಾತು

ಕಾಲೇಜು ಪ್ರಾರಂಭವಾಗಿ ೧೦ ವರ್ಷಗಳು ಕಳೆದರೂ ನೀರಿನ ಕೊರತೆ, ರಸ್ತೆಯ ನಾದುರಸ್ತಿ, ಕಾಲೇಜಿಗೆ ಬೇಕಾದ ಆಟದ ಮೈದಾನದ ಕೊರತೆ ಇತ್ಯಾದಿಗಳನ್ನು ಒದಗಿಸಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ಕಾಲೇಜಿನಿಂದ ಬಿ ಸಿ  ರೋಡುವರೆಗೆ ಕಾಲ್ನಡಿಗೆ ರ್‍ಯಾಲಿ ಮೂಲಕ ಬಂದು ಪ್ರತಿಭಟನೆ ನಡೆಸಿ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿ ತಹಶೀಲ್ದಾರ್‌ರವರಿಗೆ ಮನವಿಯನ್ನು ಸಲ್ಲಿಸಲಾಯಿತು.  ಈ ಸಂದರ್ಭ ಕಾಲೇಜು ವಿದ್ಯಾರ್ಥಿ ಪ್ರಮುಖರಾದ ಲೋಕೇಶ್, ಅಕ್ಷತಾ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಮಾತನಾಡಿದರು. ವಿದ್ಯಾರ್ಥಿ ಪ್ರಮುಖರಾದ ನಿಶ್ಮಿತಾ, ರಚನ್, ಪೂರ್ಣಶ್ರೀ, ಮತ್ತು ಪವನ್ ಹಾಗೂ ಅ.ಭಾ.ವಿ.ಪ. ನಗರ ಕಾರ್ಯದರ್ಶಿ ರಾಕೇಶ್, ಬಂಟ್ವಾಳ ತಾಲೂಕು ಸಂಚಾಲಕ್ ಆಶಿಶ್ ಅಜ್ಜಿಬೆಟ್ಟು, ತಾಲೂಕು ಸಹ ಸಂಚಾಲಕ್ ಚರಿತ್ ಕುಮಾರ್ ಹಾಗೂ ನಗರ ಸಹ ಕಾರ್ಯದರ್ಶಿಯಾದ ಶುಭರಾಜ್ ಮುಂತಾದವರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ