ಬಂಟ್ವಾಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ವಿದ್ಯಾರ್ಥಿಯ ಸದೃಢ ವಿಕಾಸಕ್ಕೆ ಕ್ರೀಡೆಯು ಅಗತ್ಯ ಎಂದು ಮಂಗಳೂರು-ಡೋಂಗ್ರಕೇರಿ ಕೆನರಾ ಪ್ರೌಢಶಾಲೆಯ ಸಂಚಾಲಕ ಬಸ್ತಿ ಪುರುಷೋತ್ತಮ ಶೆಣೈ ಹೇಳಿದರು.

ಜಾಹೀರಾತು

ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ಬಂಟ್ವಾಳ ತಾಲೂಕು ಮಟ್ಟದ ಪ.ಪೂ. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು.

ಎಸ್.ವಿ.ಎಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಮಾತನಾಡಿ, ಸೋಲು ಗೆಲುವಿನ ಮೆಟ್ಟಿಲು. ಕ್ರೀಡಾಸ್ಫೂರ್ತಿ ಗಮನದಲ್ಲಿ ಅರಿತುಕೊಂಡು ಆಡಬೇಕು ಎಂದು ಹೇಳಿದರು.

ಎಸ್.ವಿ.ಎಸ್ ಕಾಲೇಜುಗಳ ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ ಅಧ್ಯಕ್ಷತೆ ವಹಿಸಿ, ದೇಶೀಯ ಆಟವಾದ ಕಬಡ್ಡಿ ಪುರಾತನ ಕಾಲದಿಂದ ಬಂದಂತಹ ಸಂಪ್ರದಾಯಿಕ ಮತ್ತು ಜನಪ್ರಿಯ ಕ್ರೀಡೆ. ಈ ಆಟ ವೀಕ್ಷಕನ ಮನಸ್ಸಿಗೆ ಸಂತೋಷವನ್ನು ನೀಡುತ್ತದೆ ಎಂದು ಹೇಳಿದರು.

ತಾಲೂಕು ಮಟ್ಟದ ಪ.ಪೂ.ಕಾಲೇಜು ಕ್ರೀಡಾ ಸಂಯೋಜಕ ಮತ್ತು ವಿಠ್ಠಲ ಪ.ಪೂ.ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಸುಚೇತನ್ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಬಾಲಕೃಷ್ಣ ಗೌಡ, ಅರ್ಥಶಾಸ್ತ್ರ ಉಪನ್ಯಾಸಕ ಹಾಗೂ ಕ್ರೀಡಾ ಸಲಹೆಗಾರ ಪ್ರದೀಪ್ ಪೂಜಾರಿ, ಕನ್ನಡ ಉಪನ್ಯಾಸಕ ಚೇತನ್ ಎಂ., ಗಣಿತಶಾಸ್ತ್ರ ಉಪನ್ಯಾಸಕಿ ಕವಿತಾ, ರಾಜ್ಯಶಾಸ್ತ್ರ ಉಪನ್ಯಾಸಕಿ ದೀಪಿಕಾಪ್ರಿಯಾ, ಹಿಂದಿ ಉಪನ್ಯಾಸಕಿ ದಿವ್ಯಲಕ್ಷ್ಮೀ, ಕಬಡ್ಡಿ ತರಬೇತುದಾರ ತಾರಾನಾಥ ಜಿ.ಎಸ್. ಮತ್ತಿತರರು ಸಹಕರಿಸಿದರು.

ಬಂಟ್ವಾಳ ತಾಲೂಕಿನ ವಿವಿಧ ಪ.ಪೂ. ಕಾಲೇಜುಗಳ ಹುಡುಗರ ೨೦ ತಂಡ ಮತ್ತು ಹುಡುಗಿಯರ ೦೪ ತಂಡಗಳು  ತಾಲೂಕುಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದವು.

ವಿದ್ಯಾರ್ಥಿನಿ ಶ್ವೇತಾ ಕೆ.ಪಿ ಮತ್ತು ಮಾನಸ  ಪ್ರಾರ್ಥಿಸಿದರು. ಎಸ್.ವಿ.ಎಸ್ ಪ.ಪೂ. ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ. ಸ್ವಾಗತಿಸಿ, ಕನ್ನಡ ಉಪನ್ಯಾಸಕಿ ಅಪರ್ಣ ಕಾರ್‍ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಲೆಪ್ಟಿನೆಂಟ್ ಸುಂದರ್ ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*