ಕಾಂಗ್ರೆಸ್ ನಿಂದಷ್ಟೇ ಬಡವರಿಗೆ ಸ್ವಾಭಿಮಾನದ ಬದುಕು: ರಮಾನಾಥ ರೈ

ಬ್ಯಾಂಕ್ ರಾಷ್ಟ್ರೀಕರಣ, ಭೂ ಸುಧಾರಣೆ ಕಾಯ್ದೆ ಮೊದಲಾದ ಕಾಂತ್ರಿಕಾರಿ ಯೋಜನೆಗಳ ಮೂಲಕ ಯುಪಿಎ ಸರಕಾರ ದೇಶದ ಜನರ ಹಿತ ರಕ್ಷಣೆಯ ಕಾರ್ಯ ನಡೆಸಿದೆ. ಕಾಂಗ್ರೆಸ್ ಸರಕಾರದಿಂದ ಮಾತ್ರ ಬಡವರಿಗೆ ಸ್ವಾಭಿಮಾನದ ಬದುಕು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಜಾಹೀರಾತು

ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜನ ವಿರೋಧಿ ನೀತಿಯನ್ನು ವಿರೋಧಿಸಿ ಬಂಟ್ವಾಳ ಯುವ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನಲ್ಲಿ ಮಂಗಳವಾರ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಇಂಧನ, ಗ್ಯಾಸ್ ಸಹಿತ ದಿನ ಬಳಕೆ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು ದೇಶದ ಪ್ರತೀಯೊಬ್ಬರೂ ಯುಪಿಎ ಮತ್ತು ಎನ್ಡಿಎ ಸರಕಾರದ ತುಲನೆ ಮಾಡುವ ದಿನ ಬಂದಿದೆ ಎಂದರು.

ನೂರು ದಿನದಲ್ಲಿ ಕಪ್ಪು ಹಣ ತರುತ್ತೇವೆ ಎಂದವರಿಗೆ ನಾಲ್ಕು ವರ್ಷ ಕಳೆದರೂ ಕಪ್ಪು ಹಣ ತರಲು ಸಾಧ್ಯವಾಗಿಲ್ಲ. ನೋಟು ಬಂದಿಯಿಂದ ಭ್ರಷ್ಟಾಚಾರ, ಕಪ್ಪು ಹಣ, ನಕ್ಸಲೈಟ್, ಭಯೋತ್ಪಾದನೆ ನಿರ್ಮೂಲನೆ ಆಗುತ್ತದೆ ಎಂದವರಿಗೆ 99 ಶೇಕಡ ಹಳೆ ನೋಟು ವಾಪಸ್ ಬಂದಿದೆ ಎನ್ನುವ ಮೂಲಕ ಆರ್ಬಿಐ ಶಾಕ್ ನೀಡಿದೆ. ನೋಟು ಬಂದಿ ಮಾಡುವ ಮೂಲಕ ಜನಸಾಮಾನ್ಯರಿಗೆ ಕೇಂದ್ರ ಸರಕಾರ ಅನ್ಯಾಯ ಮಾಡಿದೆ ಎಂದು ಅವರು ವಾಗ್ದಾಲಿ ನಡೆಸಿದರು.

ಪ್ರತಿಭಟನಾ ಸಭೆಯ ಬಳಿಕ ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಜಾಹೀರಾತು

ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಬಂಟ್ವಾಳ ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮುಹಮ್ಮದ್ ನಂದರಬೆಟ್ಟು, ಸದಸ್ಯೆ ವಸಂತಿ ಚಂದಪ್ಪ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಎಸ್.ಮುಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಶಾಹುಲ್ ಹಮೀದ್, ಪದ್ಮಶೇಖರ್ ಜೈನ್, ಯುವ ಕಾಂಗ್ರೆಸ್ ದಕ್ಷಣ ಕನ್ನಡ ಉಪಾಧ್ಯಕ್ಷ ಲುಕ್ಮಾನ್ ಕೈಕಂಬ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಎಪಿಎಂಸಿ ಅಧ್ಯಕ್ಷ ಪದ್ಮನಾಭ ರೈ, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಪ್ರಶಾಂತ್ ಕುಲಾಲ್, ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ, ನಾಯಕರಾದ ಸಿದ್ದಿಕ್ ಬೋಗೋಡಿ, ರಶೀದ್ ಬಾಳ್ತಿಲ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಾಂಗ್ರೆಸ್ ನಿಂದಷ್ಟೇ ಬಡವರಿಗೆ ಸ್ವಾಭಿಮಾನದ ಬದುಕು: ರಮಾನಾಥ ರೈ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*