ಪಾಣೆಮಂಗಳೂರಿನಲ್ಲಿ ಚಾತುರ್ಮಾಸ ಆಚರಿಸುತ್ತಿರುವ 108 ಮುನಿಶ್ರೀ ವೀರಸಾಗರ ಮಹಾರಾಜರ ಮಂಗಲ ವರ್ಷಾಯೋಗ ನಿಮಿತ್ತ ಭಾನುವಾರ ಶ್ರೀ ಗಣಧರ ವಲಯ ಆರಾಧನೆ ನಡೆಯಲಿದೆ.
ಎಂ. ಶತ್ರುಂಜಯ ಶೆಟ್ಟಿ, ಮಕ್ಕಳು ಪ್ರಾಯೋಜಕತ್ವದಲ್ಲಿ ಶ್ರೀ ಗಣಧರ ವಲಯ ಆರಾಧನೆ ನಡೆಯಲಿದ್ದು, ಸಾಮೂಹಿಕ ಆರಾಧನೆಗೆ ಕುಳಿತುಕೊಳ್ಳುವ ಶ್ರಾವಕರು ಚಾತುರ್ಮಾಸ ಸಮಿತಿಯನ್ನು ಸಂಪರ್ಕಿಸಿ ನೋಂದಾಯಿಸಬೇಕಾಗಿ ವಿನಂತಿ.
ಜಾಹೀರಾತು
ಅಪರಾಹ್ನ 3ರಿಂದ ಧಾರ್ಮಿಕ ಸಭೆಯಲ್ಲಿ 108 ಮುನಿ ಶ್ರೀ ವೀರ ಸಾಗರ ಮಹಾರಾಜರು ಗಣಧರ ಪೀಠದಿಂದ ಸಮಸ್ತ ಸಮಾಜದವರಿಗೆ ಮಂಗಲ ಪ್ರವಚನ ನೀಡಲಿದ್ದಾರೆ.
ಧರ್ಮಸಭೆಯಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಗೌರವ ಉಪಸ್ಥಿತಿ ಇರಲಿದ್ದು, ನಾನಾ ಸಮಾಜದ ಸಂಘಟನೆಗಳ ಪದಾಧಿಕಾರಿಗಳು ಗಣ್ಯರು ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಧರ್ಮ ಬಂಧುಗಳು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪುಣ್ಯಭಾಗಿಗಳಾಗಬೇಕಾಗಿ ವಿನಂತಿ ಎಂದು ಚಾತುರ್ಮಾಸ ಸಮಿತಿಯ ಕಾರ್ಯಾಧ್ಯಕ್ಷ ಶ್ರೀ ಸುದರ್ಶನ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "17ರಂದು ಗಣಧರ ವಲಯ ಆರಾಧನೆ, ಸಂಜೆ ಧಾರ್ಮಿಕ ಸಭೆ"