ಬಂಟ್ವಾಳ

17ರಂದು ಗಣಧರ ವಲಯ ಆರಾಧನೆ, ಸಂಜೆ ಧಾರ್ಮಿಕ ಸಭೆ

ಪಾಣೆಮಂಗಳೂರಿನಲ್ಲಿ ಚಾತುರ್ಮಾಸ ಆಚರಿಸುತ್ತಿರುವ 108 ಮುನಿಶ್ರೀ ವೀರಸಾಗರ ಮಹಾರಾಜರ ಮಂಗಲ ವರ್ಷಾಯೋಗ ನಿಮಿತ್ತ ಭಾನುವಾರ ಶ್ರೀ ಗಣಧರ ವಲಯ ಆರಾಧನೆ ನಡೆಯಲಿದೆ.

ಎಂ. ಶತ್ರುಂಜಯ ಶೆಟ್ಟಿ, ಮಕ್ಕಳು ಪ್ರಾಯೋಜಕತ್ವದಲ್ಲಿ ಶ್ರೀ ಗಣಧರ ವಲಯ ಆರಾಧನೆ ನಡೆಯಲಿದ್ದು, ಸಾಮೂಹಿಕ ಆರಾಧನೆಗೆ ಕುಳಿತುಕೊಳ್ಳುವ ಶ್ರಾವಕರು ಚಾತುರ್ಮಾಸ ಸಮಿತಿಯನ್ನು ಸಂಪರ್ಕಿಸಿ ನೋಂದಾಯಿಸಬೇಕಾಗಿ ವಿನಂತಿ.

ಜಾಹೀರಾತು

ಅಪರಾಹ್ನ 3ರಿಂದ  ಧಾರ್ಮಿಕ ಸಭೆಯಲ್ಲಿ 108 ಮುನಿ ಶ್ರೀ ವೀರ ಸಾಗರ ಮಹಾರಾಜರು ಗಣಧರ ಪೀಠದಿಂದ ಸಮಸ್ತ ಸಮಾಜದವರಿಗೆ ಮಂಗಲ ಪ್ರವಚನ ನೀಡಲಿದ್ದಾರೆ.

ಧರ್ಮಸಭೆಯಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಗೌರವ ಉಪಸ್ಥಿತಿ ಇರಲಿದ್ದು, ನಾನಾ ಸಮಾಜದ ಸಂಘಟನೆಗಳ ಪದಾಧಿಕಾರಿಗಳು ಗಣ್ಯರು ಹಾಗೂ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು  ಭಾಗವಹಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಧರ್ಮ ಬಂಧುಗಳು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪುಣ್ಯಭಾಗಿಗಳಾಗಬೇಕಾಗಿ ವಿನಂತಿ ಎಂದು ಚಾತುರ್ಮಾಸ ಸಮಿತಿಯ ಕಾರ್ಯಾಧ್ಯಕ್ಷ ಶ್ರೀ ಸುದರ್ಶನ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts