ವಿಟ್ಲ

ಸರಕಾರಿ ಯೋಜನೆ ಜನರತ್ತ ಕೊಂಡೊಯ್ಯುವುದೇ ಒಡಿಯೂರು ಯೋಜನೆಯ ಉದ್ದೇಶ: ಸದಾಶಿವ ಅಳಿಕೆ


ಕೇಂದ್ರ ಹಾಗೂ ರಾಜ್ಯ ಸರಕಾರಗಳ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವುದೇ ಒಡಿಯೂರು ಯೋಜನೆಯ ಉದ್ದೇಶವಾಗಿದೆ ಎಂದು ಒಡಿಯೂರು ಶ್ರೀ ಗ್ರಾಮ ವಿಕಾಸದ ಯೋಜನೆಯ ವಿಸ್ತರಣಾಧಿಕಾರಿ ಸದಾಶಿವ ಅಳಿಕೆ ಅವರು ಹೇಳಿದರು.

ಭಾರತ ಸರಕಾರದ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಅಭಿವೃದ್ಧಿ ಮಂಡಳಿ, ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಹಾಗೂ ಒಡಿಯೂರು ಶ್ರೀ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ.) ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಬಂಟ್ವಾಳ ತಾಲೂಕು ವತಿಯಿಂದ ಒಡಿಯೂರು ಶ್ರೀ ಕ್ಷೇತ್ರದಲ್ಲಿ ನಡೆದ ಅಸಂಘಟಿತ ಕಾರ್ಮಿಕರ 2 ದಿನಗಳ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕರ ಹಕ್ಕು, ಯೋಜನೆ, ಶಿಕ್ಷಣ, ಆರೋಗ್ಯ ಸೌಲಭ್ಯಗಳ ನೆರವು ಮಾಹಿತಿ ಪಡೆದು ಕಾರ್ಮಿಕ ವರ್ಗ ಸದೃಢವಾಗಬೇಕಿದೆ ಎಂದವರು ತಿಳಿಸಿದರು.
ವಿಟ್ಲ ಶಿಶು ಮತ್ತು ಮಹಿಳಾ ಯೋಜನಾಧಿಕಾ ರಿ ಸುಧಾ ಜೋಷಿ, ಕರೋಪಾಡಿ ಗ್ರಾಮ ಘಟ ಸಮಿತಿ ಅಧ್ಯಕ್ಷೆ ನಾಗವೇಣಿ ಟಿ. ಶೆಟ್ಟಿ, ಕನ್ಯಾನ ಗ್ರಾಮ ಸೇವಾರ್ಥಿ ರಾಧಾಕೃಷ್ಣ ಕನ್ಯಾನ, ಕ್ಷೇತ್ರದ ಕಾರ್ಯಕರ್ತ ಸಂತೋಷ ಭಂಡಾರಿ ಉಪಸ್ಥಿತರಿದ್ದರು.

ಜಾಹೀರಾತು

ಕಾರ್ಮಿಕ ಶಿಕ್ಷಣ ಅಧಿಕಾರಿ ಸತೀಶ್ ಕುಮಾರ್ ಅವರ ಕಾರ್ಮಿಕ ಯೋಜನೆಯ ಬಗ್ಗೆ ಪ್ರಸ್ತಾವನೆ ಗೈದರು. ಪಂಚಾಯತ್ ತರಬೇತುದಾರ ಮಂಜು ವಿಟ್ಲ, ಪತ್ರಕರ್ತ ಫಾರೂಕ್ ಬಂಟ್ವಾಳ ಮಾಹಿತಿ ಸಂವಾದ ನಡೆಸಿದರು. ಯೋಜನಾ ಕಚೇರಿ ಸಿಬ್ಬಂದಿ ವೀಕ್ಷಾ ಸ್ವಾಗತಿಸಿ, ಸೇವಾ ದೀಕ್ಷಿತ ವಿಠಲಾಚಾರ್ಯ ವಂದಿಸಿದರು. ಸಂಯೋಜಕಿ ಲೀಲಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ