ತುಳುನಾಡಿನ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದ ಪ್ರಧಾನ ಅರ್ಚಕರ ಕುರಿತು ಸಾಮಾಜಿಕ ಜಾಲಾತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವವರ ಬಗ್ಗೆ ಅವರ ಮೊಮ್ಮಗ ಹರ್ಷಿತ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ.
97 ವರ್ಷದ ಬಾಬು ಮೂಲ್ಯರವರು ಆರೋಗ್ಯವಂತರಾಗಿದ್ದು, ದೈವಸ್ಥಾನಕ್ಕೆ ಬಂದ ಭಕ್ತರೊಬ್ಬರು ಅವರ ಭಾವಚಿತ್ರ ಕ್ಲಿಕ್ಕಿಸಿ ಮೃತಪಟ್ಟಿರುವುದಾಗಿ ಸುಳ್ಳು ಸುದ್ದಿ ಹಬ್ಬಿಸಿ ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಸಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿರುವ ಅರೋಪಿಯನ್ನು ಪತ್ತೆ ಹಚ್ಚಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆಗ್ರಹಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಾಟ್ಸಾಪ್ ನಲ್ಲಿ ಹರಡಿದ ಸುಳ್ಸುದ್ದಿ: ಕುಟುಂಬದವರಿಂದ ದೂರು"