ಬಂಟ್ವಾಳ

ದೇಯಿ ಬೈದೆತಿ ಅವಮಾನ: ಹಿಂಜಾವೇ ಪ್ರತಿಭಟನೆ

ಪುತ್ತೂರಿನಲ್ಲಿ ದೇಯಿ ಬೈದೆತಿಯ ಪುತ್ಹಳಿಯನ್ನು ಅಪವಿತ್ರಗೊಳಿಸಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ ಆರೋಪಿಯ ವಿರುದ್ದ ಹಿಂದೂ ಜಾಗರಣಾ ವೇದಿಕೆಯ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ದೊಂದಿ ಹಿಡಿದು ಪ್ರತಿಭಟನೆ ನಡೆಯಿತು.
ಹಿಂದೂ ಜಾಗರಣಾ ವೇದಿಕೆಯ ಕಾರ್‍ಯಕಾರಿಣಿ ಸದಸ್ಯ ರಾಧಕೃಷ್ಣ ಅಡ್ಯಂತಾಯ ಮಾತನಾಡಿ, ಹಿಂದೂಗಳ ಆರಾಧ್ಯ ದೈವ ಮಾತೆ ದೇಯಿ ಬೈದೆತಿಯ ಪುತ್ಹಳಿಯನ್ನು ಅಪವಿತ್ರಗೊಳಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಮತಾಂದ ಶಕ್ತಿಗಳಿಗೆ ಸರಿಯಾದ ಶಿಕ್ಷೆ ಆಗುವವರೆಗೆ ನಮ್ಮ ಹೋರಾಟ ನಡೆಯುತ್ತದೆ ಎಂದರು.

ಜಾಹೀರಾತು


ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ತೊಟ, ಜಾಗರಣಾ ವೇದಿಕೆಯ ಮಂಗಳೂರು ವಿಭಾಗ ಸಂಚಾಲಕ ರವಿರಾಜ್ ಬಿಸಿರೋಡ್ , ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ, ತಾಲೂಕು ಅಧ್ಯಕ್ಷರಾದ ಚಂದ್ರ ಕಲಾಯಿ, ಸಂಚಾಲಕರಾದ ಪ್ರಶಾಂತ ಕೆಂಪುಗುಡ್ಡೆ ಮತ್ತು ಸಹಸಂಚಾಲಕರಾದ ಕಿರಣ್ ಮೂರ್ಜೆ, ಸತೀಶ್ ಶೆಟ್ಟಿ ಪಡೆಂಕಿಮಾರ್ ಉಪಸ್ಥಿತರಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ