ಕಲ್ಲಡ್ಕ

ಶ್ರೀರಾಮ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಕಾರ್ಯಕ್ರಮ

ಸಾಹಿತ್ಯ ರಚನೆಗೆ ಬದುಕಿನ ಅನುಭವಗಳು ಹಾಗೂ ವಿಸ್ತಾರವಾದ ಓದು ಸಹಕಾರಿಯಾಗುತ್ತದೆ. ಪುಸ್ತಕ ಓದಿನಿಂದ ಆಗುವ ಅನುಭವ ಹಾಗೂ ಸ್ವತಂತ್ರ ಚಿಂತನೆಯಿಂದ ಒಳ್ಳೆಯ ಕೃತಿಗಳ ರಚನೆ ಆಗುತ್ತದೆ. ಶಾಲಾ ಕಾಲೇಜಿನ ಹಂತದಲ್ಲಿ ವಿದ್ಯಾರ್ಥಿಗಳಿಗೆ   ಬರವಣಿಗೆ ಕೌಶಲ್ಯವನ್ನು ತಿಳಿಸಿಕೊಡಬೇಕಾಗುತ್ತದೆ. ಆರಂಭದಲ್ಲಿ ಪ್ರಾಸ ಬದ್ದವಾದ ಚುಟುಕುಗಳ ಮೂಲಕ ಪ್ರೇರಣೆ ಪಡೆಯಬಹುದು ಎಂದು  ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಉಪನ್ಯಾಸಕ ಸಾಹಿತಿ ಚೇತನ್ ಮುಂಡಾಜೆ ಹೇಳಿದರು.

ಜಾಹೀರಾತು

ಶ್ರೀರಾಮ ಪದವಿಪೂರ್ವ ಕಾಲೇಜಿನ ಸಾಹಿತ್ಯ ವೇದಿಕೆಯಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ವತಯಿಂದ ಏರ್ಪಡಿಸಲಾದ ಸಾಹಿತ್ಯ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀರಾಮ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ವಸಂತ ಬಲ್ಲಾಳ್ ಮಾತನಾಡಿ ಸಾಹಿತ್ಯದಲ್ಲಿ ರಾಷ್ಟ್ರೀಯತೆ ಚಿಂತನೆ ನಡೆಯಬೇಕು . ದೇಶ, ಸಂಸ್ಕೃತಿ ನಾಡು  ನುಡಿಯ ಬಗ್ಗೆ ಬರೆಯಲು ಯುವ ಕವಿಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯವಿದೆ ಎಂದು ಹೇಳಿದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಅಧ್ಯಕ್ಷ  ಜಯಾನಂದ ಪೆರಾಜೆ ಅಧ್ಯಕ್ಷತೆ ವಹಿಸಿದ್ದರು. ಸಂಚಾಲಕ ನ್ಯಾಯವಾದಿ ರಾಜಾರಾಮ ನಾಯಕ್ ಪ್ರಸ್ತಾವನೆ ಗೈದರು. ಪ್ರತಿಭಾರಾಮ ಸಾಹಿತ್ಯ ಸಂಘದ ನಿರ್ದೇಶಕಿ ವಿಲಾಸಿನಿ ಮಾತಾಜಿ ಸ್ವಾಗತಿಸಿದರು.ಉಪನ್ಯಾಸಕಿಯರಾದ ಸ್ವಾತಿ, ಕಾಜಲ್ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts