ಬಂಟ್ವಾಳ

ಪರಿಣಾಮಕಾರಿ ಕಾರ್ಯಕ್ರಮಗಳಿಂದ ಶೋಷಣೆಮುಕ್ತ ಸಮಾಜ ನಿರ್ಮಾಣ: ರೈ

ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಿದಾಗ ಶೋಷಣೆಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು .. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಫಲ್ಗುಣಿ ಸ್ರ್ತೀ ಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ವಾರ್ಷಿಕ ಮಹಾ ಸಭೆ ಮತ್ತು ..ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ಉಚಿತ ಚಿಕಿತ್ಸಾ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಆರ್ಥಿಕವಾಗಿ, ರಾಜಕೀಯವಾಗಿ ಸಾಮಾಜಿಕವಾಗಿ ಎಲ್ಲ ರೀತಿಯಿಂದಲೂ ಮಹಿಳೆಯರನ್ನು ಬಲಿಷ್ಠರನ್ನಾಗಿ ಮಾಡಲು ಮತ್ತು ಹೆಣ್ಮಕ್ಕಳ, ಮಕ್ಕಳ ಕಲ್ಯಾಣಕ್ಕೆ ನಾನಾ ಕಾರ್ಯಕ್ರಮಗಳನ್ನು ಸರಕಾರ ಹಮ್ಮಿಕೊಂಡಿದೆ ಎಂದರು.

ಸ್ತ್ರೀ ಶಕ್ತಿ ಸಂಘಗಳು ಸಹಕಾರಿ ಸಂಘಗಳನ್ನು ಸ್ವತಂತ್ರವಾಗಿ ಸ್ಥಾಪಿಸಿದ ಕಾರಣ ಹೆಣ್ಮಕ್ಕಳು ಸ್ವಾಭಿಮಾನಿ ಬದುಕು ಸಾಗಿಸಲು ಸಹಕಾರಿಯಾಗಿದೆ. ಸರಕಾರ ಇಲಾಖೆಯ ಮೂಲಕ ಅಂಗನವಾಡಿಗಳಲ್ಲಿ ಅಗತ್ಯ ಅಹಾರದ ಜೊತೆ ಗರ್ಭಿಣಿಯರಿಗೆ ಮಾತೃಪೂರ್ಣ ಯೋಜನೆ ಹಮ್ಮಿಕೊಂಡಿದೆ ಎಂದರು.

ಅಧ್ಯಕ್ಷತೆಯನ್ನು ಫಲ್ಗುಣಿ ಸ್ರ್ತೀಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷೆ ಗೀತಾ ಜಯತೀರ್ಥ  ವಹಿಸಿದ್ದರು.

ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿ ಸುಧಾ ಜೋಶಿ, ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ಮಾಯಿಲಪ್ಪ ಸಾಲ್ಯಾನ್, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ| ಸಹನಾ ಶೆಟ್ಟಿ, ಸಾಂತ್ವಾನ ಕೇಂಧ್ರದ ಸಮಾಜ ಕಾರ್ಯಕರ್ತ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಸಹಕಾರಿ ಸಂಘದ ಅಭಿವೃದ್ದಿಗೆ ಸಹಕಾರ ನೀಡಿದ ಉಸ್ತುವಾರಿ ಸಚಿವ ಬಿ.ರಮನಾಥ ರೈ ಅವರನ್ನು ಗೌರವಿಸಲಾಯಿತು ಮತ್ತು ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಅವರು ಸಂಘಕ್ಕೆ ನೀಡಿದ ಉಚಿತ ಕಂಪ್ಯೂಟರನ್ನು ಸಚಿವರ ಮೂಲಕ ಸಂಘದ ಸದಸ್ಯರಿಗೆ ಹಸ್ತಾಂತರಿಸಲಾಯಿತುಫಲ್ಗುಣಿ ಸ್ರ್ತೀ ಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ನಿ. ಇದರ ಉಪಾಧ್ಯಕ್ಷೆ ಮಲ್ಲಿಕಾ ಶೆಟ್ಟಿ ಸ್ವಾಗತಿಸಿ ನಿರ್ದೇಶಕಿ ಸುನೀತಾ ವಂದಿಸಿದರು.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts