ಬಂಟ್ವಾಳ

ಪರಿಣಾಮಕಾರಿ ಕಾರ್ಯಕ್ರಮಗಳಿಂದ ಶೋಷಣೆಮುಕ್ತ ಸಮಾಜ ನಿರ್ಮಾಣ: ರೈ

ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಿದಾಗ ಶೋಷಣೆಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು .. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಫಲ್ಗುಣಿ ಸ್ರ್ತೀ ಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ವಾರ್ಷಿಕ ಮಹಾ ಸಭೆ ಮತ್ತು ..ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ಉಚಿತ ಚಿಕಿತ್ಸಾ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಆರ್ಥಿಕವಾಗಿ, ರಾಜಕೀಯವಾಗಿ ಸಾಮಾಜಿಕವಾಗಿ ಎಲ್ಲ ರೀತಿಯಿಂದಲೂ ಮಹಿಳೆಯರನ್ನು ಬಲಿಷ್ಠರನ್ನಾಗಿ ಮಾಡಲು ಮತ್ತು ಹೆಣ್ಮಕ್ಕಳ, ಮಕ್ಕಳ ಕಲ್ಯಾಣಕ್ಕೆ ನಾನಾ ಕಾರ್ಯಕ್ರಮಗಳನ್ನು ಸರಕಾರ ಹಮ್ಮಿಕೊಂಡಿದೆ ಎಂದರು.

ಸ್ತ್ರೀ ಶಕ್ತಿ ಸಂಘಗಳು ಸಹಕಾರಿ ಸಂಘಗಳನ್ನು ಸ್ವತಂತ್ರವಾಗಿ ಸ್ಥಾಪಿಸಿದ ಕಾರಣ ಹೆಣ್ಮಕ್ಕಳು ಸ್ವಾಭಿಮಾನಿ ಬದುಕು ಸಾಗಿಸಲು ಸಹಕಾರಿಯಾಗಿದೆ. ಸರಕಾರ ಇಲಾಖೆಯ ಮೂಲಕ ಅಂಗನವಾಡಿಗಳಲ್ಲಿ ಅಗತ್ಯ ಅಹಾರದ ಜೊತೆ ಗರ್ಭಿಣಿಯರಿಗೆ ಮಾತೃಪೂರ್ಣ ಯೋಜನೆ ಹಮ್ಮಿಕೊಂಡಿದೆ ಎಂದರು.

ಜಾಹೀರಾತು

ಅಧ್ಯಕ್ಷತೆಯನ್ನು ಫಲ್ಗುಣಿ ಸ್ರ್ತೀಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಅಧ್ಯಕ್ಷೆ ಗೀತಾ ಜಯತೀರ್ಥ  ವಹಿಸಿದ್ದರು.

ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿ ಸುಧಾ ಜೋಶಿ, ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಬೂಡಾ ಅಧ್ಯಕ್ಷ ಸದಾಶಿವ ಬಂಗೇರ, ಮಾಯಿಲಪ್ಪ ಸಾಲ್ಯಾನ್, ಆಯುಷ್ ಇಲಾಖೆಯ ವೈದ್ಯಾಧಿಕಾರಿ ಡಾ| ಸಹನಾ ಶೆಟ್ಟಿ, ಸಾಂತ್ವಾನ ಕೇಂಧ್ರದ ಸಮಾಜ ಕಾರ್ಯಕರ್ತ ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಸಹಕಾರಿ ಸಂಘದ ಅಭಿವೃದ್ದಿಗೆ ಸಹಕಾರ ನೀಡಿದ ಉಸ್ತುವಾರಿ ಸಚಿವ ಬಿ.ರಮನಾಥ ರೈ ಅವರನ್ನು ಗೌರವಿಸಲಾಯಿತು ಮತ್ತು ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಅವರು ಸಂಘಕ್ಕೆ ನೀಡಿದ ಉಚಿತ ಕಂಪ್ಯೂಟರನ್ನು ಸಚಿವರ ಮೂಲಕ ಸಂಘದ ಸದಸ್ಯರಿಗೆ ಹಸ್ತಾಂತರಿಸಲಾಯಿತುಫಲ್ಗುಣಿ ಸ್ರ್ತೀ ಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ನಿ. ಇದರ ಉಪಾಧ್ಯಕ್ಷೆ ಮಲ್ಲಿಕಾ ಶೆಟ್ಟಿ ಸ್ವಾಗತಿಸಿ ನಿರ್ದೇಶಕಿ ಸುನೀತಾ ವಂದಿಸಿದರು.

 

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ