Categories: ಬಂಟ್ವಾಳ

ಸೆ.22ರಂದು ಸವಿತಾ ಸೌಹಾರ್ದ ಸಹಕಾರಿ ಸ್ವಂತ ಕಚೇರಿ ಉದ್ಘಾಟನೆ

ಸವಿತಾ ಸೌಹಾರ್ದ ಸಹಕಾರಿ ನಿಯಮಿತ ಇದರ ಸ್ವಂತ ಕಚೇರಿ ಬಿ.ಸಿ.ರೋಡಿನ ಮಿನಿ ವಿಧಾನ ಸೌಧ ಮುಂಭಾಗ ಶುಭ ಲಕ್ಷ್ಮೀ ಸಂಕೀರ್ಣದ ಒಂದನೇ ಮಹಡಿಯಲ್ಲಿ ಸೆ.22 ರಂದು ಉದ್ಘಾಟನೆ ಗೊಳ್ಳಲಿದೆ.

ಸೌಹಾರ್ದ ಸಂಯುಕ್ತ ಸಹಕಾರಿ ರಾಜ್ಯ ಮಾಜಿ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಕಚೇರಿ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ, ಸಹಕಾರಿ ಮುತ್ಸದ್ಧಿ, ಎಸ್.ಸಿ.ಡಿ.ಸಿ.ಸಿ. ಮಾಜಿ ಅಧ್ಯಕ್ಷ ಡಾ. ಏರ್ಯ ಲಕ್ಷ್ಮೀ ನಾರಾಯಣ ಆಳ್ವ,  ಸಹಕಾರಿ ಯ ಭದ್ರತಾ ಕೋಶ,ಸಭಾ ಕೊಠಡಿಯನ್ನು ಸವಿತಾ ಸಮಾಜದ ಜಿಲ್ಲಾಧ್ಯಕ್ಷ  ಆನಂದ ಭಂಡಾರಿ ಅವರು ಉದ್ಘಾಟಿಸಲಿದ್ದಾರೆ. ಸಹಕಾರಿ  ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ, ಉಪಾಧ್ಯಕ್ಷ ಸುರೇಶ್ ನಂದೊಟ್ಟು ಹಾಗೂ ನಿರ್ದೇಶಕರು ಭಾಗವಹಿಸುವರು.

ಜಾಹೀರಾತು

ಮಹಾಸಭೆ: ಸೆ.22 ರಂದು ಬೆಳಗ್ಗೆ 11.30ಕ್ಕೆ ಬಿ.ಸಿ.ರೋಡಿ ನ ಡಾ.ಬಿ. ಶ್ರೀನಿವಾಸ್ ರಾವ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಸಹಕಾರಿ ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲಿದೆ ಎಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನೀಶ್ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.