ಬಂಟ್ವಾಳ

ಅಕ್ಟೋಬರ್ 1ರಂದು ಜೊತೆಜೊತೆಯಲಿ ಸೀಸನ್ 2

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಸೇವಾದಳದ ವತಿಯಿಂದ ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ಜೊತೆಜೊತೆಯಲಿ ಸೀಸನ್ 2 ಎನ್ನುವ ವಿಶಿಷ್ಟ ಹಾಗೂ ವಿನೂತನ ಕಾರ್ಯಕ್ರಮ ಅಕ್ಟೋಬರ್ 1 ರಂದು ನಡೆಯಲಿದೆ.

ಜಾಹೀರಾತು

ಕುಲಾಲ ಸಮುದಾಯಕ್ಕೆ ಸೇರಿದ ಬಂಟ್ವಾಳ ತಾಲೂಕಿನ ಎಲ್ಲ ಯೋಧರನ್ನು ಅಭಿನಂದಿಸುವ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭ ನಿವೃತ್ತಿ ಹೊಂದಿರುವ ಯೋಧರಾದ ಮಾಣಿ ಉಮೇಶ್ ಮೂಲ್ಯ, ಕೊಡಾಜೆ ನಿತೀಶ್ ಕುಲಾಲ್, ಮಾಣಿ ಮಾಧವ ಕುಲಾಲ್, ನೇರಂಬೋಳು ನಾರಾಯಣ ಮೂಲ್ಯ, ಅಮ್ಟಾಡಿ ಆನಂದ ಮೂಲ್ಯ, ನೆಟ್ಲ ದಿನೇಶ್ ಕುಲಾಲ್, ಪೇರಮೊಗ್ರು ಜನಾರ್ದನ ಮೂಲ್ಯ, ಸಂಗಬೆಟ್ಟು ಮೋಹನ ಮೂಲ್ಯ, ಬಂಟ್ವಾಳ ಹರೀಶ ಮೂಲ್ಯ, ಕಡೆಗೋಳಿ ನಾರಾಯಣ ಮೂಲ್ಯ, ಬಿ.ಸಿ.ರೋಡು ಬಾಲಚಂದ್ರ, ವಗ್ಗ ವೆಂಕಪ್ಪ ಮೂಲ್ಯ, ಪಣೆಕಲ ಗಣೇಶ್ ಮೂಲ್ಯ, ಸಂತೋಷ್ ಮುಡಿಪು, ಬಿ.ಸಿ.ರೋಡು ಚಂದಪ್ಪ ಮೂಲ್ಯ ಹಾಗೂ ಪ್ರಸ್ತುತ ಕರ್ತವ್ಯದಲ್ಲಿರುವ ಕಂದೂರು ಪ್ರಜ್ವಲ್ ಇವರನ್ನು ಅಭಿನಂದಿಸಲಾಗುವುದು.

ಸಾಂಸ್ಕೃತಿಕ ವೈವಿಧ್ಯ ಸ್ಪರ್ಧೆ : ಕುಲಾಲ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಸಾಂಸ್ಕೃತಿಕ ವೈವಿಧ್ಯ ಸ್ಪರ್ಧೆ ನಡೆಯಲಿದೆ.  ಆರ್.ಜೆ ಅನುರಾಗ್ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಲಿರುವರು. ಉತ್ತಮ ನಿರೂಪಕ ಹಾಗೂ ಉತ್ತಮ ಕಾರ್ಯಕ್ರಮ ಸಂಯೋಜಕ ಪ್ರಶಸ್ತಿಗಳನ್ನು ನೀಡಲಾಗುವುದು. ಭಾಗವಹಿಸುವ ತಂಡಗಳು ಸೆಪ್ಟೆಂಬರ್ 28ರ ಒಳಗೆ ಹೆಸರು ನೋಂದಾಯಿಸಬಹುದು.

ಯಕ್ಷನಾಟ್ಯ ತರಗತಿಗೆ ಚಾಲನೆ : ಕುಂಭೋದರಿ ಯಕ್ಷ ಬಳಗ ಬಂಟ್ವಾಳ ಇದರ ವತಿಯಿಂದ ಸಮುದಾಯ ಭವನದಲ್ಲಿ ಯಕ್ಷನಾಟ್ಯ ತರಗತಿಯ ಶುಭಾರಂಭವು ಇದೇ ಸಂದರ್ಭದಲ್ಲಿ ನಡೆಯಲಿರುವುದು.

ಹಾಸ್ಯಲಾಸ್ಯ ಕಾರ್ಯಕ್ರಮ : ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಚಾಪರ್‍ಕ ತಂಡದ ತಿಮ್ಮಪ್ಪ ಕುಲಾಲ್, ಸುರೇಶ್ ಕುಲಾಲ್, ಪಾಂಡುರಂಗ ಅಡ್ಯಾರ್, ಲಕುಮಿ ತಂಡದ ಎಚ್ಕೆ ನಯನಾಡು, ಬಲೆ ತೆಲಿಪಾಲೆ ಖ್ಯಾತಿಯ ಅರುಣ್ ಕುಮಾರ್, ನಿತಿನ್ ತುಂಬೆ ಹಾಗೂ ಸ್ಥಳೀಯ ಕಲಾವಿದರಾದ ಗಣೇಶ್ ದುಗನಕೋಡಿ ಹಾಗೂ ರಶ್ಮಿ ಅಲೆತ್ತೂರು ಅಭಿನಯಿಸುವ ವೆಲ್ಕಮ್ ಟು ಯಮಲೋಕ ಎನ್ನುವ ಹಾಸ್ಯ ನಾಟಕ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸೇವಾದಳದ ದಳಪತಿ ಸದಾನಂದ ಬಂಗೇರ ಹಾಗೂ ಕಾರ್ಯಕ್ರಮ ಸಂಯೋಜಕ ಯಾದವ ಅಗ್ರಬೈಲು ತಿಳಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

7 hours ago