ಬಂಟ್ವಾಳ ತಾಲೂಕಿನ ಹಲವೆಡೆ ಶಾರದೋತ್ಸವ ಸಂಭ್ರಮ

ಬಂಟ್ವಾಳ ತಾಲೂಕಿನ ನಾನಾ ಕಡೆಗಳಲ್ಲಿ ಶಾರದೋತ್ಸವ ಸಂಭ್ರಮ. ಹಲವೆಡೆ ಶಾರದಾ ಮೂರ್ತಿಯನ್ನು ಪ್ರತಿಷ್ಠಾಪಿಸಿ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾರ್ವಜನಿಕವಾಗಿ ಆಚರಿಸಿದರೆ, ಕೆಲವೆಡೆ ಕುಟುಂಬ, ಸಮಾಜದ ಬಂಧುಗಳು ಸೇರಿ ಆಚರಿಸುತ್ತಾರೆ. ತಾಲೂಕಿನ ಕೆಲವು ಸಾರ್ವಜನಿಕ ಶಾರದೋತ್ಸವಗಳ ವಿವರ ಇಲ್ಲಿದೆ.

ಕಲ್ಲಡ್ಕ ಶ್ರೀ ಶಾರದಾ ಪೂಜಾ ಮಹೋತ್ಸವಕ್ಕೆ 40ರ ಸಂಭ್ರಮ. ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಕಲ್ಲಡ್ಕದಲ್ಲಿ ಆಯೋಜಿಸಿರುವ ಈ ಉತ್ಸವ 28ರಂದು ಆರಂಭಗೊಳ್ಳಲಿದೆ. ಪ್ರತಿದಿನ ಹಲವು ಕಾರ್ಯಕ್ರಮಗಳೊಂದಿಗೆ ನಡೆಯುವ ಉತ್ಸವದ ಶೋಭಾಯಾತ್ರೆ ಅ.೧ರಂದು ಸಂಜೆ ನಡೆಯುವುದು.

ಜಾಹೀರಾತು


ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಳದಲ್ಲಿ ಆರಾಸಲ್ಪಡುವ ಶ್ರೀ ಶಾರದಾ ಮಹೋತ್ಸವಕ್ಕೆ ಈ ಬಾರಿ ಸುವರ್ಣ ಮಹೋತ್ಸವ ಸಂಭ್ರಮ. ಸೆ.೨೬ರಿಂದ ಆರಂಭಗೊಂಡಿರುವ ಉತ್ಸವ ಅಕ್ಟೋಬರ್ ೧ವರೆಗೆ ನಾನಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಪುರಸಭಾ ಸದಸ್ಯ ಎ.ಗೋವಿಂದ ಪ್ರಭು ಅಧ್ಯಕ್ಷತೆಯ ಸಮಿತಿ ಸದಸ್ಯರು ಸಹಿತ ಉಪಸಮಿತಿ, ಭಜಕವೃಂದ ಶ್ರೀ ಶಾರದೋತ್ಸವದ ಸುವರ್ಣಮಹೋತ್ಸವದ ನೇತೃತ್ವ ವಹಿಸಿದೆ.

ವಾಮದಪದವಿನಲ್ಲಿ ೨೫ನೇ ವರ್ಷದ ಶಾರದೋತ್ಸವ ಸೆ.೨೮ರಿಂದ ೩೦ವರೆಗೆ ನಡೆಯಲಿದೆ. ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸಮಿತಿ ಆಶ್ರಯದಲ್ಲಿ ಪ್ರಥಮ ವರ್ಷದ ಶ್ರೀ ಶಾರದಾ ಪೂಜಾ ಮಹೊತ್ಸವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೂಡುಪಡುಕೋಡಿ ಸ.ಹಿ.ಪ್ರಾ.ಶಾಲೆ ಶಾಲಾ ವಠಾರದಲ್ಲಿ ಸೆ. ೨೭ರಂದು ಜರಗಲಿದೆ.

ಪುಂಜಾಲಕಟ್ಟೆ ಶ್ರೀ ಶಾರದಾಂಬಾ ಯುವಕ ಮಂಡಲ ವತಿಯಿಂದ ಸೆ. ೨೭-ಅ. ೧ವರೆಗೆ ಶ್ರೀ ಶಾರದಾ ಪೂಜೆ ನಡೆಯಲಿದೆ. ರಾಯಿ,ಕೊಯಿಲ,ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಸೆ. ೩೦-ಅ. ೧ ವರೆಗೆ ವಿವಿಧ ಕಾರ್ಯಕ್ರಮಗಳು ನಡೆಯುವುದು. ಸೆ. ೨೮ರಂದು ಮಾವಿನಕಟ್ಟೆಯಲ್ಲಿ ಶ್ರೀ ಶಾರದೋತ್ಸವ ನಡೆಯಲಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳ ತಾಲೂಕಿನ ಹಲವೆಡೆ ಶಾರದೋತ್ಸವ ಸಂಭ್ರಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*