ಶ್ರೀ ಶಾರದಾ ಹಬ್ಬದ ಸಮಯ ವೈಭವದ ಶೋಭಾಯಾತ್ರೆ ನಡೆಯಲಿರುವುದರಿಂದ ಮುಂಜಾಗರೂಕತೆ ವಹಿಸಿ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಬಂಟ್ವಾಳನಗರ, ಬಂಟ್ವಾಳ ಗ್ರಾಮಾಂತರ, ವಿಟ್ಲ, ಉಪ್ಪಿನಂಗಡಿ, ಪುಂಜಾಲ್ಕಟ್ಟೆ, ಸುಬ್ರವಣ್ಯ ಪೊಲೀಸ್ ಠಾಣೆ, ಧರ್ಮಸ್ಥಳ, ಬೆಳ್ತಂಗಡಿ ಠಾಣೆ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ ಠಾಣೆ, ಸುಳ್ಯ ಠಾಣೆ, ಬೆಳ್ಳಾರೆ ಇಲ್ಲಿ ಬಾರ್& ರೆಸ್ಟೋರೆಂಟ್ ಮತ್ತು ವೈನ್ ಶಾಪ್/ ಮದ್ಯ ಮಾರಾಟ ಕೇಂದ್ರಗಳನ್ನು ಆಯಾಯ ದಿನಾಂಕ ಮತ್ತು ಸ್ಥಳಗಳಲ್ಲಿ ಸೆಪ್ಟಂಬರ್ 28 ರಿಂದ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 5 ರ ಬೆಳಿಗ್ಗೆ 6 ಗಂಟೆವರೆಗೆ ಬಂದ್ ಇರಿಸುವಂತೆ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಆದೇಶವನ್ನು ಕಟ್ಟುನಿಟ್ಟಾಗಿ ಜ್ಯಾರಿಗೊಳಿಸುವಂತೆ ದ.ಕ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಿಹಾಗೂ ನಿಷೇದಾಜ್ಞೆ ಇರುವ ಸಮಯದಲ್ಲಿ ಆ ವ್ಯಾಪ್ತಿಗೊಳಪ್ಟ್ ವೈನ್ ಶಾಪ್, ಬಾರ್ಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು(ಸೀಲು) ಗಳನ್ನು ಕಡ್ಡಾಯವಾಗಿ ಮಾಡುವಂತೆ ವ್ಯವಸ್ಥೆಗೊಳಿಸಲು ಆದೇಶಿಸಲಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "Sep 28- Oct 5: ಮದ್ಯದಂಗಡಿ ಮುಚ್ಚಲು ಆದೇಶ"