ಬಂಟ್ವಾಳ

ಪಾಣೆಮಂಗಳೂರು ಚಾತುರ್ಮಾಸ – ಶ್ರೀ ಪಂಚ ಪರಮೇಷ್ಠಿ ಆರಾಧನೆ

ಬಂಟ್ವಾಳ: ಪರಮ ಪೂಜ್ಯ 108 ಮುನಿ ಶ್ರೀ ವೀರ ಸಾಗರ ಮಹಾರಾಜರ ಮಂಗಲ ವರ್ಷಾಯೋಗ ನಿಮಿತ್ತ, ಪಾಣೆಮಂಗಳೂರು ಶ್ರೀಅನಂತನಾಥ ಸ್ವಾಮೀ ಜಿನ ಚೈತ್ಯಾಲಯದಲ್ಲಿ, ಭಾನುವಾರ ಅಕ್ಟೋಬರ್ 1ರಂದು ಸುಮನಾಜಿ ಅಮ್ಮ ಮತ್ತು ಮಕ್ಕಳು, ಜೈನರ ಪೇಟೆ, ಪಾಣೆಮಂಗಳೂರು ಪ್ರಾಯೋಜಕತ್ವದಲ್ಲಿ ಪರಮ ಪೂಜ್ಯ 108 ಮುನಿಶ್ರೀ ವೀರ ಸಾಗರ ಮಹಾರಾಜರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ಕ್ಷೇತ್ರ ಕನಕಗಿರಿ ಕ್ಷೇತ್ರದ ಪರಮ ಪೂಜ್ಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ, ಪೂರ್ವಾಹ್ನ 9 ರಿಂದ ಶ್ರೀ ಪಂಚ ಪರಮೇಷ್ಠಿ ಆರಾಧನೆ ನಡೆಯಲಿದೆ.

ಈ ಸಾಮೂಹಿಕ ಆರಾಧನೆಗೆ ಕುಳಿತುಕೊಳ್ಳುವ ಶ್ರಾವಕರು ಚಾತುರ್ಮಾಸ ಸಮಿತಿಯನ್ನು ಸಂಪರ್ಕಿಸಿ ನೋಂದಾಯಿಸಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.

ಜಾಹೀರಾತು

ಅಪರಾಹ್ನ 3ರಿಂದ  ಧಾರ್ಮಿಕ ಸಭೆಯಲ್ಲಿ 108 ಮುನಿ ಶ್ರೀ ವೀರ ಸಾಗರ ಮಹಾರಾಜರು ಗಣಧರ ಪೀಠದಿಂದ ಮಂಗಲ ಪ್ರವಚನ, ಶಂಕಾ ಸಮಾಧಾನ, ಶ್ರಾವಕರ ಧಾರ್ಮಿಕ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಧರ್ಮಸಭೆಯಲ್ಲಿ ಸ್ವಸ್ತಿಶ್ರೀ ಶ್ರೀ ಕ್ಷೇತ್ರ ಕನಕಗಿರಿ ಭುವನಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು, ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸದಸ್ಯ ನಳಿನ್ ಕುಮಾರ್ ಕಟೀಲು ಅತಿಥಿಗಳಾಗಿ ಭಾಗವಹಿಸುವರು ಎಂದು ಚಾತುರ್ಮಾಸ ಸಮಿತಿಯ ಕಾರ್ಯಾಧ್ಯಕ್ಷ ಶ್ರೀ ಸುದರ್ಶನ್ ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

 

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.