ಬಂಟ್ವಾಳ

ಲಯನ್ಸ್ ಕ್ಲಬ್ ಆಶ್ರಯದಲ್ಲಿ ರಕ್ತದಾನ ಶಿಬಿರ

ಕಾರ್ಮೆಲ್ ಕಾಲೇಜು ಮೊಡಂಕಾಪು ರೆಡ್ ಕ್ರಾಸ್ ಹಾಗೂ ಎನ್.ಎಸ್.ಎಸ್  ಘಟಕ , ಲಯನ್ಸ್ ಹಾಗೂ ಲಯನೆಸ್ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ , ರೆಡ್ ಕ್ರಾಸ್ ಸೊಸೈಟಿ ಸಹಯೋಗದೊಂದಿಗೆ ಕಾರ್ಮೆಲ್ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು.

ಜಾಹೀರಾತು

ಲಯನ್ಸ್ ಕ್ಲಬ್ ಬಂಟ್ವಾಳ್ ಅಧ್ಯಕ್ಷರಾದ ಜಗದೀಶ್ ಯಡಪಡಿತ್ತಾಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೆಡ್ ಕ್ರಾಸ್ ಆರ್.ಎಮ್. ಒ ಡಾ. ದುರ್ಗಾಪ್ರಸಾದ್ ರಕ್ತದಾನದ ಮಹತ್ವವನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಭಗಿನಿ ಸುಪ್ರಿಯಾ ಎ.ಸಿ ಲಯನೆಸ್ ಕ್ಲಬ್ ಅದ್ಯಕ್ಷೆಯಾದ  ಗೀತಾ ಯಡಪಡಿತ್ತಾಯ, ರೆಡ್‌ಕ್ರಾಸ್ ಸೊಸೈಟಿ  ಬ್ಲಡ್ ಬ್ಯಾಂಕ್ ಮಂಗಳೂರು ಮೇಲ್ವಿಚಾರಕರಾದ ಡಾ. ಎಡ್ವರ್ಡ್ ವಾಜ಼್, ಶೋಭಾ ಮಾರ್ಲ, ಎನ್.ಎಸ್.ಎಸ್  ಮತ್ತು ರೆಡ್ ಕ್ರಾಸ್ ಸಂಯೋಜಕಿಯರಾದ ಮದುರಾ ಹಾಗೂ ವಿನಿತಾ ವೇಗಸ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಮರಿಯಂ ಮಾಜ಼ಿಯ ಸ್ವಾಗತಿಸಿ, ರಕ್ಷಾ ಜೈನ್ ವಂದಿಸಿದರು. ಐರಲ್ ಕಾರ್ಯಕ್ರಮ ನಿರೂಪಿದರು. ವಿದ್ಯಾರ್ಥಿಗಳು ಹಾಗು ಸಾರ್ವಜನಿಕರು ರಕ್ತದಾನ ಮಾಡಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.