ಫರಂಗಿಪೇಟೆ

ರಸ್ತೆ ಕಾಮಗಾರಿಗೆ ಸಚಿವ ಯು.ಟಿ.ಖಾದರ್ ಚಾಲನೆ

ಕೊಡ್ಮಾಣ್‌ನಿಂದ ಬಾರೆಕಾಡು ಸಂಪರ್ಕಿಸುವ ರಸ್ತೆ ಕಾಂಕ್ರೀಟಿಕರಣಕ್ಕೆ ಆಹಾರ ಸಚಿವ ಯು.ಟಿ.ಖಾದರ್ ಶುಕ್ರವಾರ ರಾತ್ರಿ ಶಿಲಾನ್ಯಾಸ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಇಲ್ಲಿನ ಜನರ ಬಹುದಿನಗಳ ಬೇಡಿಕೆಯಂತೆ ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ರಸ್ತೆಯನ್ನು ಕಾಂಕ್ರೀಟಿಕರಣಗೊಳಿಸಲಾಗುತ್ತಿದೆ. ಅಲ್ಲದೆ ಕೊಡ್ಮಾಣ್ ಗ್ರಾಮದ ಪೊನ್ನೋಡಿ ರಸ್ತೆಗೂ ಅನುದಾನ ಬಿಡುಗಡೆಯಾಗಿದ್ದು, ಶೀಘ್ರ ಅಭಿವೃದ್ಧಿ ಕಾಮಗಾರಿ ನಡೆಯಲಿದೆ ಎಂದರು.

ಜಾಹೀರಾತು

ಇದೇ ಸಂದರ್ಭ ಸಚಿವರು ಫರಂಗಿಪೇಟೆಯ ಹತ್ತನೆ ಮೈಲು ಬಳಿ ಹೈಮಾಸ್ಕ್ ವಿದ್ಯುತ್ ದೀಪ ಹಾಗೂ ತುಂಬೆಯ ಮುಯಿನಾಬಾದ್ ಬಳಿ 10 ಲಕ್ಷ ರೂ. ವೆಚ್ಚದ ರಸ್ತೆ ಕಾಂಕ್ರೀಟಿಕರಣಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಜಿ.ಪಂ.ಮಾಜಿ ಸದಸ್ಯ ಉಮರ್ ಫಾರೂಕ್, ಮಂಗಳೂರು ತಾ.ಪಂ.ಅಧ್ಯಕ್ಷ ಮುಹಮ್ಮದ್ ಮೋನು, ಪುದು ಗ್ರಾ.ಪಂ.ಉಪಾಧ್ಯಕ್ಷ ಹಾಸೀರ್ ಪೇರಿಮಾರ್, ಯುವ ಕಾಂಗ್ರೆಸ್ ಕಾರ್ಯದರ್ಶಿ ಸೌಕತ್ ಪೇರಿಮಾರ್, ಇಸಾಕ್ ಫರಂಗಿಪೇಟೆ, ವೃಂದ ಪೂಜಾರಿ, ನೊರ್ಬರ್ಟ್, ಡೊನಾಲ್ಡ್, ದೇವದಾಸ್ ಶೆಟ್ಟಿ ಕೊಡ್ಮಾನ್, ನೀಲನ್ ನೆತ್ತರಕೆರೆ, ಲಿಯೋ ಕೊಡ್ಮಾನ್, ಸಂತೋಷ್, ಮೋನಪ್ಪ ಮಜಿ, ನಿಸಾರ್ ಅಹ್ಮದ್, ಇಬ್ರಾಹಿಂ ವಳಚ್ಚಿಲ್, ಮಾಧವ, ಪ್ರಭಾಕರ, ಪ್ರವೀಣ್, ರಫೀಕ್ ಪೇರಿಮಾರ್, ಇಸ್ಮಾಯಿಲ್, ಶರೀಫ್, ಗಫೂರ್, ಶಮೀರ್ ಮತ್ತಿತರರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ