ಬಂಟ್ವಾಳ

ಭೂ ಅತಿಕ್ರಮಣ ತೆರವು ಒತ್ತಾಯಿಸಿ ಉಪವಾಸ ಸತ್ಯಾಗ್ರಹ

 

ಕಡೇಶ್ವಾಲ್ಯ ಗ್ರಾಮದಲ್ಲಿ ಭೂ ಅತಿಕ್ರಮಣವಾಗಿದ್ದು, ಅದನ್ನು ತೆರವುಗೊಳಿಸಿಲ್ಲ ಹಾಗೂ ಭೂವಂಚಿತರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಸಿ ಅರ್ಜಿದಾರರು ಸೋಮವಾರ ಬಂಟ್ವಾಳ ತಹಶೀಲ್ದಾರ್ ಕಚೇರಿ ಬಳಿ ಉಪವಾಸ ಸತ್ಯಾಗ್ರಹ ನಡೆಸಿದರು.

ಜಾಹೀರಾತು

ಉಪವಾಸ ನಿಲ್ಲಿಸಲು ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಪುರಂದರ ಹೆಗ್ಡೆ ವಿನಂತಿಸಿದರೂ ಸ್ಪಷ್ಟ ಭರವಸೆದ ದೊರಕುವವರೆಗೆ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಮುಖಂಡರು, ಅಹೋರಾತ್ರಿ ಸತ್ಯಾಗ್ರಹ ನಡೆಸಲು ತೀರ್ಮಾನಿಸಿದರು.

ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು , ಗೋಪಾಲ ನೇರಳಕಟ್ಟೆ, ರಾಜು ಹೊಸಮಠ, ಅಣ್ಣಿ ಏಳ್ತಿಮಾರ್, ಚಂದ್ರಶೇಖರ ಯು, ಮೋಹನದಾಸ ವಿಟ್ಲ, ಸೋಮಪ್ಪ ಪುಣಚ ಮೊದಲಾದವರು ಉಪಸ್ಥಿತರಿದ್ದರು. ಸ್ಥಳದಲ್ಲಿ ಬಂಟ್ವಾಳ ಠಾಣಾ ಎಸ್ಸೈ ರಕ್ಷಿತ್ ಗೌಡ ನೇತೃತ್ವದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.