ಬಂಟ್ವಾಳ

ತ್ಯಾಜ್ಯ ಸಂಸ್ಕರಣಾ ಘಟಕಕ್ಕೆ ಎಸ್‌ಡಿಪಿಐ ವಿರೋಧ

ಸಜೀಪನಡು ಗ್ರಾಮದ ಕಂಚಿನಡ್ಕಪದವಿನಲ್ಲಿ ನಿರ್ಮಾಣ ಹಂತದಲ್ಲಿರುವ ಬಂಟ್ವಾಳ ಪುರಸಭೆಯ ತ್ಯಾಜ್ಯ ಸಂಸ್ಕರಣಾ ಘಟಕವನ್ನು ಎಸ್‌ಡಿಪಿಐ ವಿರೋಧಿಸುತ್ತದೆ ಎಂದು ಸಜೀಪನಡು ಗ್ರಾಪಂ ಅಧ್ಯಕ್ಷ ಮುಹಮ್ಮದ್ ನಾಸೀರ್ ಆರೋಪಿಸಿದ್ದಾರೆ.

ಜಾಹೀರಾತು

ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟಕ ನಿರ್ಮಾಣಕ್ಕೆ ಆರಂಭದಿಂದಲೂ ಎಸ್‌ಡಿಪಿಐ ವಿರೋಧಿಸುತ್ತಲೇ ಬಂದಿದೆ. ಇದೀಗ ಸ್ಥಳೀಯ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸುವ ಮೂಲಕ ಪಂಚಾಯತ್ ಮೇಲೆ ಆರೋಪ ಹೊರಿಸುವುದು ಖಂಡನೀಯ ಎಂದರು.

ಬಂಟ್ವಾಳ ಕ್ಷೇತ್ರದ ಶಾಸಕರೂ ಆದ ಸಚಿವ ರಮಾನಾಥ ರೈ ಅವರು ಕಂಚಿನಡ್ಕಪದವಿನಲ್ಲೇ ತ್ಯಾಜ್ಯ ಘಟಕ ನಿರ್ಮಾಣವಾಗಬೇಕೆಂಬ ಉತ್ಸಾಹದಲ್ಲಿದ್ದರೆ, ಮಂಗಳೂರು ಕ್ಷೇತ್ರದ ಶಾಸಕ, ಸಚಿವ ಯು.ಟಿ. ಖಾದರ್ ಇದಕ್ಕೆ ನಿರಾಸಕ್ತಿ ತೋರುತ್ತಿದ್ದಾರೆ. ಇವರಿಬ್ಬರ ಈ ಗುದ್ದಾಟದಿಂದ ಗ್ರಾಮಸ್ಥರು ಅತಂತ್ರರಾಗುವಂತಾಗಿದೆ ಎಂದ ಅವರು, ಘಟಕವನ್ನು ವಿರೋಧಿಸಿ ಪುರಸಭೆಯ ಮುಂದೆ ಪ್ರತಿಭಟಿಸಲು ಸಾಧ್ಯವಾಗದ ಕಾಂಗ್ರೆಸ್, ಪಂಚಾಯತ್‌ನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದೆ ಎಂದು ವ್ಯಂಗ್ಯ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ಸಜೀಪನಡು ಘಟಕದ ಅಧ್ಯಕ್ಷ ಎಸ್.ಎನ್. ಅಬ್ದುಲ್ ರಹಿಮಾನ್, ಸದಸ್ಯರಾದ ಅಬ್ದುಲ್ ರಶೀದ್, ಪ್ರಧಾನ ಕಾರ್ಯದರ್ಶಿ ನವಾಝ್ ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts