ಒಳ್ಳೆಯ ಸಂಕಲ್ಪ ಮಾಡಿದಾಗ ದೇವರ ಅನುಗ್ರಹ


ದೇವರನ್ನು ನಾವು ಭಕ್ತಿಯಿಂದ ಅಪ್ಪಿ ಹಿಡಿದಾಗ, ದೇವರು ನಮ್ಮನ್ನು ಪ್ರೀತಿಯಿಂದ ಒಪ್ಪಿಕೊಳ್ಳುತ್ತಾರೆ, ಅವ್ಯಕ್ತ ರೂಪದ ದೇವರನ್ನು ನಾವು ನಂಬಿ ನಡೆದಾಗ, ನಮ್ಮ ಬಾಳು ಪಾವನವಾಗುತ್ತದೆ, ಒಳ್ಳೆಯ ಸಂದರ್ಭದಲ್ಲಿ ಒಳ್ಳೆಯ ಸಂಕಲ್ಪ ಮಾಡಿದಾಗ ದೇವರ ಅನುಗ್ರಹವಾಗುತ್ತದೆ ಇದು ಚಾತುರ್ಮಾಸದಲ್ಲಿ ಸಾಧ್ಯವಾಗಿದೆ ಎಂದು ಶ್ರೀ ಕಟೀಲು ಕ್ಷೇತ್ರದ ವೇ|ಮೂ| ಲಕ್ಷ್ಮೀನಾರಾಯಣ ಆಸ್ರಣ್ಣರು ಹೇಳಿದರು.

ಜಾಹೀರಾತು

ಪಾಣೆಮಂಗಳೂರು ಶ್ರೀಅನಂತನಾಥ ಸ್ವಾಮೀ ಜಿನ ಚೈತ್ಯಾಲಯದಲ್ಲಿ ಪರಮ ಪೂಜ್ಯ ಶಾಂತ ಮೂರ್ತಿ ವಾತ್ಸಲ್ಯ ರತ್ನಾಕರ ಆಚಾರ್ಯ ಶ್ರೀ ೧೦೮ ಸನ್ಮತಿ ಸಾಗರ ಮಹಾರಾಜರ ಶಿಷ್ಯರಾದ, 108 ಮುನಿಶ್ರೀ ವೀರಸಾಗರ ಮಹಾರಾಜರ ಚಾತುರ್ಮಾಸ ಧರ್ಮ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪರಮ ಪೂಜ್ಯ ಮುನಿಶ್ರೀಗಳು ತಮ್ಮ ಮಂಗಲ ಪ್ರವಚನದಲ್ಲಿ ಆಶೀರ್ವಚನ ನೀಡುತ್ತಾ ಜೀವನದಲ್ಲಿ ಶ್ರದ್ಧೆ ನಿಷ್ಠೆ ಮತ್ತು ಆಚರಣೆಗಳು ಅತ್ಯಗತ್ಯ, ಇದರಿಂದ ಜೀವನ ಪಾವನವಾಗುವುದು. ಧರ್ಮದ ಆಚರಣೆಯಲ್ಲಿ ಕಷ್ಟಗಳು ಎದುರಾಗುವುದು ಸಹಜ, ಅವುಗಳನ್ನು ಎದುರಿಸಿ ಮುನ್ನಡೆದಲ್ಲಿ ಧರ್ಮ ಉಳಿಯುತ್ತದೆ ಎಂದರು. ಹಿಂದೆ ಇಂತಹ ಕಷ್ಟದ ಸನ್ನಿವೇಶ ನಿರ್ಮಾಣವಾಗಿ, ಸಂದರ್ಭದಲ್ಲಿ ಶ್ವೇತಾಂಬರ ಪಂಥದ ಉದಯವಾಯಿತು ಎಂದು ತಿಳಿಸಿದರು.

. . ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡುತ್ತಾ ನಮ್ಮ ತೌಳವ ಸಂಸ್ಕೃತಿಯಲ್ಲಿ ಎಲ್ಲಾ ಜಾತಿ, ಧರ್ಮಗಳು ಒಂದಾಗಿ ಸಾಮರಸ್ಯರಿಂದ ಬಾಳುತ್ತಿದ್ದಾರೆ. ನಿತ್ಯ ಜೀವನದಲ್ಲಿ ಧಾರ್ಮಿಕ ಅನುಷ್ಠಾನವನ್ನು ಮಾಡುತ್ತಾ ಲೌಕಿಕ ಭ್ರಮೆಗೆ ಒಳಗಾಗಬಾರದು ಆಧುನಿಕ ಕಾಲದ ವ್ಯವಸ್ಥೆಯಲ್ಲಿ ನಮ್ಮ ತನವನ್ನು ಉಳಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಜಾಹೀರಾತು

ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸುರೇಶ್ ಬಲ್ಲಾಳ್, ಹೇಮಚಂದ್ರ ಮೂಡಬಿದಿರೆ, ಚಾತುರ್ಮಾಸ ಸಮಿತಿಯ ರತ್ನಾಕರ ಜೈನ್ ಮಂಗಳೂರು, ಸುದರ್ಶನ ಜೈನ್, ಧರಣೇಂದ್ರ ಇಂದ್ರ, ಭುವನೇಂದ್ರ ಇಂದ್ರ, ಸುಭಾಷ್ ಚಂದ್ರ ಜೈನ್, ಹರ್ಷರಾಜ ಬಲ್ಲಾಳ್, ದೀಪಕ್ ಇಂದ್ರ, ಕೆ. ಪ್ರವೀಣ್ ಕುಮಾರ್, ಆದಿರಾಜ ಜೈನ್, ಭರತ್ ರಾಜ್, ಬ್ರಿಜೇಶ್ ಜೈನ್ ಉಪಸ್ಥಿತರಿದ್ದರು.

ಮಂಗಳೂರು, ಮೂಡುಬಿದಿರೆ, ವೇಣೂರು, ಧರ್ಮಸ್ಥಳ, ಕಾರ್ಕಳ, ಹಾಸನ, ಬೆಂಗಳೂರು ಮುಂತಾದ ಕಡೆಗಳಿಂದ ಅನೇಕ ಶ್ರಾವಕ ಬಂಧುಗಳು ಪಾಲ್ಗೊಂಡಿದ್ದರು.

ಮುನಿಶ್ರೀಗಳ ಪಾವನ ಸಾನ್ನಿಧ್ಯದಲ್ಲಿ ಶ್ರೀ ಅರಿಹಂತ ಪರಮೇಷ್ಠಿ ಆರಾಧನೆಯನ್ನು ಉದಯ ಕುಮಾರ್, ಸಹೋದರರು ಮತ್ತು ಕುಟುಂಬಿಕರು, ಕಟ್ಟೆಮನೆ ಪುಂಜಾಲಕಟ್ಟೆ, ಇವರ ಪ್ರಾಯೋಜಕತ್ವದಲ್ಲಿ ನೆರವೇರಿತು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಒಳ್ಳೆಯ ಸಂಕಲ್ಪ ಮಾಡಿದಾಗ ದೇವರ ಅನುಗ್ರಹ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*