ಬಂಟ್ವಾಳ

ಆಯುರ್ವೇದದ ಕುರಿತು ಜನರಿಗೆ ವಿಶ್ವಾಸ: ರಮಾನಾಥ ರೈ

ಭಾರತೀಯ ಔಷಧಿ ಪದ್ದತಿಯಾದ ಆಯುರ್ವೇದದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಆಯುಷ್ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ಬಂಟ್ವಾಳ ಇದರ ಆಶ್ರಯದಲ್ಲಿ ಬಿ.ಸಿ.ರೋಡಿನ ಎಸ್‌ಜೆಎಸ್‌ಆರ್‌ವೈ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಔಷಧೀಯ ಗುಣಗಳುಳ್ಳ ಗಿಡಮೂಲಿಕೆಗಳನ್ನು ರಕ್ಷಿಸಬೇಕಾಗಿದೆ. ಸರಕಾರವೂ ಭಾರತೀಯ ವೈದ್ಯ ಪದ್ದತಿಗೆ ಹೆಚ್ಚಿನ ಗಮ,ನ ನೀಡುತ್ತಿದೆ ಎಂದರು.

ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಎಚ್.ಖಾದರ್, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭೆ ಅಧ್ಯಕ್ಷ ರಾಮಕೃಷ್ಣ ಆಳ್ವ, ಮುಖ್ಯಾಧಿಕಾರಿ ರೇಖಾ ಶೆಟ್ಟಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಕಾರ್ಯನಿರ್ವಾಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ತಹಶೀಲ್ದಾರ್ ಪುರಂದರ ಹೆಗ್ಡೆ ಅತಿಥಿಗಳಾಗಿ ಭಾಗವಹಿಸಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

20 hours ago