ಸಿಎಂ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಿದ್ಧತಾ ಸಭೆ

ನಾನಾ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 22ರಂದು ಬಂಟ್ವಾಳಕ್ಕೆ ಆಗಮಿಸಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸಿದ್ಧತಾ ಸಭೆ ಬಿ.ಸಿ.ರೋಡಿನಲ್ಲಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು.

ಜಾಹೀರಾತು

ಈ ಸಂದರ್ಭ ವಿವಿಧ ಕಾರ್ಯಕ್ರಮಗಳ ಯಶಸ್ಸಿಗೆ ಸಹಕಾರವನ್ನು ಸಚಿವರು ಕೋರಿದರು. ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಅಪರ ಜಿಲ್ಲಾಧಿಕಾರಿ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ, ಎಎಸ್ಪಿ ಡಾ.ಅರುಣ್ ಸಭೆಯಲ್ಲಿದ್ದು ಸಲಹೆ ಸೂಚನೆ ನೀಡಿದರು.

ಇದಕ್ಕೂ ಮೊದಲು ಸಚಿವ ರೈ ಮತ್ತು ಅಧಿಕಾರಿಗಳು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಡೆಯುವ ವೇದಿಕೆ, ಸಭಾಂಗಣದ ಸಿದ್ಧತೆಯ ಹಾಗೂ ಮಿನಿ ವಿಧಾನಸೌಧದ ಪರಿಶೀಲನೆ ನಡೆಸಿದರು. ಈ ಸಂದರ್ಭ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯುಸ್ ಎಲ್. ರೋಡ್ರಿಗಸ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಸಹಿತ ಪ್ರಮುಖರು ಉಪಸ್ಥಿತರಿದ್ದರು. ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್, ಇಂಜಿನಿಯರುಗಳಾದ ಅರುಣ್ ಪ್ರಕಾಶ್ ಸಹಿತ ಇಲಾಖೆಯ ಸಿಬ್ಬಂದಿ ಮಾಹಿತಿ ನೀಡಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಿಎಂ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಿದ್ಧತಾ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*