ಜಾಹೀರಾತು
ನವೆಂಬರ್ 10ರಂದು ರಾಜ್ಯಾದ್ಯಂತ ನಡೆಯುವ ನವಕರ್ನಾಟಕ ಪರಿವರ್ತನೆ ಯಾತ್ರೆಯ ಪೂರ್ವತಯಾರಿಯ ಸಭೆ ಬಿ.ಸಿ ರೋಡಿನ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಂಜೆ ನಡೆಯಿತು.
ಜಾಹೀರಾತು
ಈ ಸಂದರ್ಭ ಮಾರ್ಗದರ್ಶನ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್, ಯಾತ್ರೆ ಸಂದರ್ಭ ಬಂಟ್ವಾಳದ ಪಕ್ಷ ಕಾರ್ಯಕರ್ತರು ಕೈಗೊಳ್ಳಬೇಕಾದ ಜವಾಬ್ದಾರಿಗಳ ಕುರಿತು ತಿಳಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಪ್ರಮುಖರಾದ ಬ್ರಿಜೇಶ್ ಚೌಟ, ಸತ್ಯಜಿತ್ ಸುರತ್ಕಲ್, ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಉಮಾನಾಥ ಕೋಟ್ಯಾನ್, ಸುಲೋಚನಾ ಜಿ.ಕೆ. ಭಟ್, ಪದ್ಮನಾಭ ಕೊಟ್ಟಾರಿ, ಎ.ರುಕ್ಮಯ ಪೂಜಾರಿ, ಜಿ.ಆನಂದ, ದಿನೇಶ್ ಭಂಡಾರಿ, ರಾಮದಾಸ ಬಂಟ್ವಾಳ, ದಿನೇಶ್ ಅಮ್ಟೂರು, ಚೆನ್ನಪ್ಪ ಕೋಟ್ಯಾನ್ ಸಹಿತ ಪ್ರಮುಖರು ಭಾಗವಹಿಸಿದ್ದರು. ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಮಾಹಿತಿ ನೀಡಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪರಿವರ್ತನಾ ಯಾತ್ರೆಗೆ ಬಂಟ್ವಾಳ ಬಿಜೆಪಿ ಪೂರ್ವತಯಾರಿ"