ಜ್ಞಾನದ ಜ್ಯೋತಿಯನ್ನು ಬೆಳಗಿಸುವ ದಿನ ದೀಪಾವಳಿ: ಒಡಿಯೂರು ಶ್ರೀ

www.bantwalnews.com 

ಅಜ್ಞಾನವೆಂಬ ರಾಕ್ಷಸನನ್ನು ದಹಿಸಿ ಜ್ಞಾನದ ಜ್ಯೋತಿಯನ್ನು ಬೆಳಗಿಸಿದ ದಿನ ದೀಪಾವಳಿ. ತಮ್ಮತನವನ್ನು ಮರೆಯದೇ ಸನಾತನ ಸಂಸ್ಕೃತಿಯನ್ನು ಬೆಳೆಸೋಣ. ಆಧುನಿಕತೆಯ ಭರದಲ್ಲಿ ಸನಾತನವನ್ನು ಮರೆಯಬೇಡಿ. ಸಂಸ್ಕಾರಯುತ ಬದುಕಿನಿಂದ ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ  ಗ್ರಾಮವಿಕಾಸ ಯೋಜನೆಯಸಂಸ್ಕೃತಿಸಂಸ್ಕಾರಕಾರ್ಯಕ್ರಮದಲ್ಲಿ ಸಂದೇಶ ನೀಡಿದರು.

ಜಾಹೀರಾತು

ಸಂದರ್ಭ ಯೋಜನೆಯ ಮಂಗಳೂರು ತಾಲೂಕಿನ ಘಟಸಮಿತಿ ಪದಾಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುರತ್ಕಲ್ ವಲಯದ ಸೇವಾದೀಕ್ಷಿತೆ ಸವಿತಾ ಉಳಿತಾಯ ಮನೋಭಾವ ಯಾಕಾಗಿ ಎಂಬ ವಿಚಾರದ ಬಗ್ಗೆ ವಿಷಯ ಮಂಡಿಸಿದರು. ಹರ್ಷಿತಾ ಅವರು ಚಟುವಟಿಕೆಯನ್ನು ನಿರ್ವಹಿಸಿದರು. ಶ್ಲೋಕವನ್ನು ಧನಲಕ್ಷ್ಮಿ ಹಾಗೂ ಅಮೃತ ವಚನವನ್ನು ಮಮತಾ ನಿರ್ವಹಿಸಿದರು. ಬಂಟ್ವಾಳ ಮತ್ತು ಮಂಗಳೂರು  ತಾಲೂಕಿನ ಸಿಬ್ಬಂದಿಗಳು ಭಗವದ್ಗೀತೆ ಅಭ್ಯಾಸಪ್ರಾಣಾಯಾಮ, ಧ್ಯಾನಹಾಗೂ ಭಜನೆಯನ್ನು ನೆರವೇರಿಸಿ ಕೊಟ್ಟರು.

ಬೆಳ್ತಂಗಡಿ ತಾಲೂಕಿನ ವಿಸ್ತರಣಾಧಿಕಾರಿಯಾದ ಯಶೋಧರ್ ಸಾಲ್ಯಾನ್ ಯೋಜನೆಯ ಮಾಸಿಕ ವರದಿ ಮಂಡಿಸಿದರು. ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಪ್ರಧಾನ ಸಂಚಾಲಕರಾದ ಟಿ. ತಾರಾನಾಥ ಕೊಟ್ಟಾರಿಯವರು ಯೋಜನೆಯ ಮಾಹಿತಿಯನ್ನು ನೀಡಿದರು. ಮುಲ್ಕಿ ವಲಯದ ಸಂಯೋಜಕಿಯಾದ ಸಾವಿತ್ರಿ ಸ್ವಾಗತಿಸಿ, ಮಂಗಳೂರು ವಲಯದ ಸಂಯೋಜಕಿ ಪ್ರತಿಭಾ ಕಾರ್ಯಕ್ರಮ ನಿರ್ವಹಿಸಿದರು. ಸುರತ್ಕಲ್ ವಲಯದ ಸಂಯೋಜಕಿ ಸುನಿತಾ ವಂದಿಸಿದರು. ವಿಟ್ಲ ಮಂಡಲದ ಪದಾಧಿಕಾರಿಗಳು ಹಾಗೂ ಯೋಜನೆಯ ವಿಸ್ತರಣಾಧಿಕಾರಿಗಳಾದ ಸುರೇಶ್ ಶೆಟ್ಟಿ ಮೊಗರೋಡಿ, ನವೀನ್ ಶೆಟ್ಟಿ ಮಂಗಳೂರು, ಸದಾಶಿವ ಅಳಿಕೆ ಹಾಗೂ ಮುರಳೀಧರ್ ಕಾರ್ಕಳ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಜ್ಞಾನದ ಜ್ಯೋತಿಯನ್ನು ಬೆಳಗಿಸುವ ದಿನ ದೀಪಾವಳಿ: ಒಡಿಯೂರು ಶ್ರೀ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*