ವಿಟ್ಲ

ಜ್ಞಾನದ ಜ್ಯೋತಿಯನ್ನು ಬೆಳಗಿಸುವ ದಿನ ದೀಪಾವಳಿ: ಒಡಿಯೂರು ಶ್ರೀ

www.bantwalnews.com 

ಅಜ್ಞಾನವೆಂಬ ರಾಕ್ಷಸನನ್ನು ದಹಿಸಿ ಜ್ಞಾನದ ಜ್ಯೋತಿಯನ್ನು ಬೆಳಗಿಸಿದ ದಿನ ದೀಪಾವಳಿ. ತಮ್ಮತನವನ್ನು ಮರೆಯದೇ ಸನಾತನ ಸಂಸ್ಕೃತಿಯನ್ನು ಬೆಳೆಸೋಣ. ಆಧುನಿಕತೆಯ ಭರದಲ್ಲಿ ಸನಾತನವನ್ನು ಮರೆಯಬೇಡಿ. ಸಂಸ್ಕಾರಯುತ ಬದುಕಿನಿಂದ ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು ಒಡಿಯೂರು ಶ್ರೀ  ಗ್ರಾಮವಿಕಾಸ ಯೋಜನೆಯಸಂಸ್ಕೃತಿಸಂಸ್ಕಾರಕಾರ್ಯಕ್ರಮದಲ್ಲಿ ಸಂದೇಶ ನೀಡಿದರು.

ಜಾಹೀರಾತು

ಸಂದರ್ಭ ಯೋಜನೆಯ ಮಂಗಳೂರು ತಾಲೂಕಿನ ಘಟಸಮಿತಿ ಪದಾಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುರತ್ಕಲ್ ವಲಯದ ಸೇವಾದೀಕ್ಷಿತೆ ಸವಿತಾ ಉಳಿತಾಯ ಮನೋಭಾವ ಯಾಕಾಗಿ ಎಂಬ ವಿಚಾರದ ಬಗ್ಗೆ ವಿಷಯ ಮಂಡಿಸಿದರು. ಹರ್ಷಿತಾ ಅವರು ಚಟುವಟಿಕೆಯನ್ನು ನಿರ್ವಹಿಸಿದರು. ಶ್ಲೋಕವನ್ನು ಧನಲಕ್ಷ್ಮಿ ಹಾಗೂ ಅಮೃತ ವಚನವನ್ನು ಮಮತಾ ನಿರ್ವಹಿಸಿದರು. ಬಂಟ್ವಾಳ ಮತ್ತು ಮಂಗಳೂರು  ತಾಲೂಕಿನ ಸಿಬ್ಬಂದಿಗಳು ಭಗವದ್ಗೀತೆ ಅಭ್ಯಾಸಪ್ರಾಣಾಯಾಮ, ಧ್ಯಾನಹಾಗೂ ಭಜನೆಯನ್ನು ನೆರವೇರಿಸಿ ಕೊಟ್ಟರು.

ಬೆಳ್ತಂಗಡಿ ತಾಲೂಕಿನ ವಿಸ್ತರಣಾಧಿಕಾರಿಯಾದ ಯಶೋಧರ್ ಸಾಲ್ಯಾನ್ ಯೋಜನೆಯ ಮಾಸಿಕ ವರದಿ ಮಂಡಿಸಿದರು. ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಪ್ರಧಾನ ಸಂಚಾಲಕರಾದ ಟಿ. ತಾರಾನಾಥ ಕೊಟ್ಟಾರಿಯವರು ಯೋಜನೆಯ ಮಾಹಿತಿಯನ್ನು ನೀಡಿದರು. ಮುಲ್ಕಿ ವಲಯದ ಸಂಯೋಜಕಿಯಾದ ಸಾವಿತ್ರಿ ಸ್ವಾಗತಿಸಿ, ಮಂಗಳೂರು ವಲಯದ ಸಂಯೋಜಕಿ ಪ್ರತಿಭಾ ಕಾರ್ಯಕ್ರಮ ನಿರ್ವಹಿಸಿದರು. ಸುರತ್ಕಲ್ ವಲಯದ ಸಂಯೋಜಕಿ ಸುನಿತಾ ವಂದಿಸಿದರು. ವಿಟ್ಲ ಮಂಡಲದ ಪದಾಧಿಕಾರಿಗಳು ಹಾಗೂ ಯೋಜನೆಯ ವಿಸ್ತರಣಾಧಿಕಾರಿಗಳಾದ ಸುರೇಶ್ ಶೆಟ್ಟಿ ಮೊಗರೋಡಿ, ನವೀನ್ ಶೆಟ್ಟಿ ಮಂಗಳೂರು, ಸದಾಶಿವ ಅಳಿಕೆ ಹಾಗೂ ಮುರಳೀಧರ್ ಕಾರ್ಕಳ ಉಪಸ್ಥಿತರಿದ್ದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.