ಕಲ್ಲಡ್ಕ

ರಸ್ತೆ ನಿರ್ಮಾಣಕ್ಕೆ ಆಗ್ರಹ: ದಲಿತ್ ಸೇವಾ ಸಮಿತಿಯಿಂದ ಪ್ರತಿಭಟನೆ

 ಬಂಟ್ವಾಳ ತಾಲೂಕು ಕೆದಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸರಕಾರಿ ಜಾಗದಲ್ಲಿ ರಸ್ತೆ ನಿರ್ಮಾಣ ಮಾಡಿಕೊಡಲು ಗ್ರಾಮ ಪಂಚಾಯತ್ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿ ಗ್ರಾಪಂ ಮುಂಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

 ಮೂವತ್ತು ದಿನಗಳೊಳಗೆ ರಸ್ತೆ ನಿರ್ಮಿಸಿಕೊಡುವ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಹಿಂಬರಹ ನೀಡಿದ ಬಳಿಕ ಪ್ರತಿಭಟನೆಯನ್ನು ಕೊನೆಗಿಳಿಸಲಾಯಿತು.

 ಪ್ರತಿಭಟನೆಯನ್ನು ಉದ್ದೇಶಿಸಿ . ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ ಸೇಸಪ್ಪ ಬೆದ್ರಕಾಡು ಮಾತನಾಡಿದರು. ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಸೋಮಪ್ಪ ಎಸ್, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮ, ಮಹಿಳಾ ಕಾರ್ಯದರ್ಶಿ ಮಲಾಶ್ರೀ ಪಿಲಿಂಜ, ಜಿಲ್ಲಾ ಉಪಾದ್ಯಕ್ಷ ಪ್ರಸಾದ್ ಬೊಳ್ಮಾರ್, ಮಹಿಳಾ ಸಂಚಾಲಕಿ ಲಲಿತ ಕೇಪು, ಮಹಿಳಾ ಘಟಕದ ಉಪಾಧ್ಯಕ್ಷ ಪ್ರೇಮ ಬಿ.ಕೆ ಬೆದ್ರಕಾಡು, ಮೀನಾಕ್ಷಿ, ಮಹಿಳಾ ಘಟಕದ ಗೌರವಾಧ್ಯಕ್ಷ ವಿಮಲ, ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಜು ಹೊಸಮಠ ಮೊದಲಾದವರು ಭಾಗವಹಿಸಿದ್ದರು.

AddThis Website Tools
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts