ತುಳು ಬದುಕಿನ ಕುರಿತು ಮಾಹಿತಿ ಪಡೆದ ಸಿಎಂ, ಅಧ್ಯಯನ ಕೇಂದ್ರಕ್ಕೆ ನೆರವು

 

ರಾಷ್ಟ್ರೀಯ ವಿಚಾರಸಂಕಿರಣಗಳು, ರಾಜ್ಯಮಟ್ಟದ ಕಾರ್ಯಕ್ರಮಗಳು ನಡೆದ ಬಿ.ಸಿ.ರೋಡಿನ ಸಂಚಯಗಿರಿಯಲ್ಲಿ ಇರುವ ಪ್ರೊ. ಕೆ. ತುಕಾರಾಮ ಪೂಜಾರಿ ಮತ್ತು ಡಾ. ಆಶಾಲತಾ ಸುವರ್ಣ ದಂಪತಿಯ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಹಾಗೂ ತುಳು ಬದುಕು ವಸ್ತು ಸಂಗ್ರಹಾಲಯಕ್ಕೆ ಭಾನುವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು.

ಈ ಸಂದರ್ಭ ತುಳು ಬದುಕಿಗೆ ಸಂಬಂಧಿಸಿದ ವಸ್ತುಗಳನ್ನು ಆಸಕ್ತಿಯಿಂದ ವೀಕ್ಷಿಸಿದ ಅವರು ಪ್ರೊ. ತುಕಾರಾಮ ಪೂಜಾರಿಯವರಿಂದ ಮಾಹಿತಿ ಪಡೆದರು. ಹುಲಿ ಓಡಿಸುವ ಸಾಧನವನ್ನು ಸ್ವತಃ ತಾನೇ ಪ್ರಯೋಗಿಸಿ ಅದರಿಂದ ಹೊರಬರುವ ಶಬ್ಧವನ್ನು ಆನಂದಿಸಿದರು. ಕೇಂದ್ರದ ಕಾರ್ಯದರ್ಶಿ ಡಾ. ಆಶಾಲತಾ ಸುವರ್ಣ ಅವರು ವಸ್ತು ಸಂಗ್ರಹಾಲಯ ಕುರಿತ ಪೂರಕ ಮಾಹಿತಿ ನೀಡಿದರು.  ಈ ಸಂದರ್ಭ ಸ್ವಾತಂತ್ರ ಹೋರಾಟಗಾರ್ತಿ, ತುಳುನಾಡನ ಅಪ್ರತಿಮ ವೀರ ಮಹಿಳೆ ಉಳ್ಳಾಲ ರಾಣಿ ಅಬ್ಬಕ್ಕ ಅವರ ಬದುಕನ್ನು ಶಾಶ್ವತವಾಗಿ ಪರಿಚಯಿಸುವ ಕಾರ್ಯ ಪ್ರೊ. ತುಕಾರಾಂ ಅವರ ನೇತೃತ್ವದಲ್ಲಿ ನಡೆದಿದೆ. ರಾಷ್ಟ್ರದ ಏಕೈಕ ಹಾಗೂ ಮೊಟ್ಟ ಮೊದಲ ಕಲಾ ಕೇಂದ್ರ ಎಂದು ಖ್ಯಾತಿ ಪಡೆದಿರುವ ರಾಣಿ ಅಬ್ಬಕ್ಕ ಆರ್ಟ್ ಗ್ಯಾಲರಿ ಹೊಂದಿರುವ ತುಳು ಅಧ್ಯಯನ ಕೇಂದ್ರಕ್ಕೆ ಸರಕಾರ ಅನುದಾನ ಒದಗಿಸಬೇಕೆಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮುಖ್ಯಮಂತ್ರಿಯವರಲ್ಲಿ ವಿನಂತಿಸಿಕೊಂಡರು. ಕೇಂದ್ರಕ್ಕೆ ಸರಕಾರದ ವತಿಯಿಂದ ಗರಿಷ್ಠ ಪ್ರಮಾಣದ ಹಣಕಾಸು ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿಈ ಸಂದರ್ಭ ತಿಳಿಸಿದರು.

ಜಾಹೀರಾತು

ಸಚಿವರಾದ ಟಿ.ಬಿ. ಜಯಚಂದ್ರ, ಯು.ಟಿ.ಖಾದರ್, ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕ ಅಭಯಚಂದ್ರ ಜೈನ್, ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ತುಳು ಅಧ್ಯಯನ ಕೇಂದ್ರವನ್ನು ವೀಕ್ಷಿಸಿದರು. ಜಿ.ಪಂ. ಸದಸ್ಯರಾದ ಬಿ. ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಸಾಹುಲ್ ಹಮೀದ್, ಅಕ್ರಮಸಕ್ರಮ ಸಮಿತಿ ಮಾಯಿಲಪ್ಪ ಸಾಲ್ಯಾನ್, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಸದಸ್ಯ ಪ್ರವೀಣ್ ಬಿ, ಎಸ್‌ವಿಎಸ್ ಕಾಲೇಜ್ ಪ್ರಿನ್ಸಿಪಾಲ್ ಡಾ. ಪಾಂಡುರಂಗ ನಾಯಕ್, ಪಿ.. ಪಾಲಿಟೆಕ್ನಿಕ್ ಕಾಲೇಜ್ ಪ್ರಿನ್ಸಿಪಾಲ್ ಪ್ರೊ. ಕೆ.ಪಿ. ಸೂಫಿ, ಪ್ರಮುಖರಾದ ಸುದರ್ಶನ್ ಜೈನ್, ವಿವೇಕ್ ಶೆಟ್ಟಿ ನಗ್ರಿಗುತ್ತು, ವಿಶನಾಥ್ ಬಂಟ್ವಾಳ, ಮಧುಸೂದನ್ ಶೆಣೈ ಮೊದಲಾದವರು ಸಂದರ್ಭದಲ್ಲಿದ್ದರು.

ಬಂಟ್ವಾಳ ನ್ಯೂಸ್ ವಸ್ತುಸಂಗ್ರಹಾಲಯ, ಅಧ್ಯಯನ ಕೇಂದ್ರದ ಕುರಿತು ವಿವರವಾದ ವರದಿಯನ್ನು ಕವರ್ ಸ್ಟೋರಿಯಡಿ ಪ್ರಕಟಿಸಿತ್ತು. ಹೆಚ್ಚಿನ ಓದಿಗೆ ಕ್ಲಿಕ್ ಮಾಡಿರಿ

https://bantwalnews.com/2016/12/15/%E0%B2%9C%E0%B2%A8%E0%B2%B8%E0%B2%BE%E0%B2%AE%E0%B2%BE%E0%B2%A8%E0%B3%8D%E0%B2%AF%E0%B2%B0-%E0%B2%AC%E0%B2%A6%E0%B3%81%E0%B2%95%E0%B2%BF%E0%B2%A8-%E0%B2%AA%E0%B3%81%E0%B2%9F%E0%B2%97%E0%B2%B3/

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ತುಳು ಬದುಕಿನ ಕುರಿತು ಮಾಹಿತಿ ಪಡೆದ ಸಿಎಂ, ಅಧ್ಯಯನ ಕೇಂದ್ರಕ್ಕೆ ನೆರವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*