ಬಂಟ್ವಾಳ

ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ದೀಪಾವಳಿ ಸಂಭ್ರಮ

ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ದೀಪಾವಳಿ ಸಂಭ್ರಮಾ ನಡೆಯಿತು. ಕಾರ್ಯಕ್ರಮದಲ್ಲಿ ಗೊಪೂಜೆ, ತುಳಸಿಪೂಜೆ, ಲಕ್ಷ್ಮೀಪೂಜೆ ಹಾಗೂ ಬಲೀಂದ್ರ ಪೂಜೆ ನಡೆಸಲಾಯಿತು. ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಜಗದೀಶ ಎಡಪಾಡಿತ್ತಾಯ ವಹಿಸಿದರು.

ಜಾಹೀರಾತು

ಪ್ರಧಾನ ಅತಿಥಿಯಾಗಿ ಸಂಸ್ಕಾರರ ಭಾರತಿಯ ಕರ್ನಾಟಕ ದಕ್ಷಿಣದ ಕಾರ್ಯದರ್ಶಿ ಆದರ್ಶ ಗೋಖಲೆ ಹಾಗೂ ಲಯನ್ಸ್ ಜಿಲ್ಲಾ ದೀಪಾವಳಿ ಕೋರ್ಡಿನೇಟರ್ ಸ್ವರೂಪ ಶೆಟ್ಟಿ ಭಾಗವಹಿಸಿದರು.

ಲಯನೆಸ್ ಅಧ್ಯಕ್ಷಿ ಚಿತ್ರಾ ಎಡಪಾಡಿತ್ತಾಯ, ಕಾರ್ಯದರ್ಶಿಗಳಾದ ರಾಮಕೃಷ್ಣ ರಾವ್, ಸುಜಾತ ರವಿಶಂಕರ್ ಕೋಶಾಧಿಕಾರಿಗಳಾದ ರೋಶಿತಾಶ್ವ ಹಾಗೂ ವಸಂತಿ ಎಲ್. ಶೆಟ್ಟಿ, ವಲಯಾಧ್ಯಕ್ಷ ಶಿವಾನಂದ ಬಾಳಿಗಾ, ಐ.ಪಿ.ಪಿ. ಲಕ್ಷ್ಮಣ್ ಕುಲಾಲ್ ಉಪಸ್ಥಿತರಿದ್ದರು.

ಕ್ಲಬ್‌ನ ಸರ್ವಿಸ್ ಕೋರ್ಡಿನೇಟರ್ ದಾಮೋದರ ಬಿ.ಎಮ್., ಶ್ರೀನಿವಾಸ ಪೂಜಾರಿ, ಉಪಾದ್ಯಕ್ಶರಾದ ಸುದಾಕರ್ ಆಚಾರ್, ಉಮೇಶ ಆಚಾರ್, ಪುಷ್ಪರಾಜ್ ಶೆಟ್ಟಿ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪಾಣೆಮಂಗಳೂರಿನ ನೇತ್ರಾವತಿ ನದಿಯಲ್ಲಿ ಇಬ್ಬರ ಜೀವ ಉಳಿಸಿದ ಅರ್ಚಕರಾದ ಪ್ರಕಾಶ ಮರಾಠೆಯವರನ್ನು ಸನ್ಮಾನಿಸಲಾಯಿತು. ಒಬ್ಬರಿಗೆ ಕೃತಕ ಕಾಲಿನ ಜೋಡಣೆಗೆ ಧನಸಹಾಯ ಹಾಗೂ ಇನ್ನೊಬ್ಬರಿಗೆ ಕಿಡ್ನಿ ಚಿಕಿತ್ಸೆಗಾಗಿ ಧನಸಹಾಯ ನೀಡಲಾಯಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.