ಬಂಟ್ವಾಳ

ಕೇಂದ್ರ, ರಾಜ್ಯ ಸರ್ಕಾರಗಳ ನೀತಿ ವಿರೋಧಿಸಿ 30ರಂದು ಪಂಜಿನ ಮೆರವಣಿಗೆ

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಎಡ ಹಾಗೂ ಪ್ರಜಾಪ್ರಭುತ್ವ ಜಾತ್ಯಾತೀತ ಸಂಘಟನೆಗಳ ಆಶ್ರಯದಲ್ಲಿ ಅ.30 ರಂದು ಸಂಜೆ 6.30ರಿಂದ ರಾಷ್ಟ್ರವ್ಯಾಪಿ ಚಳುವಳಿಯ ಅಂಗವಾಗಿ ಸಮಾನಮನಸ್ಕ ಸಂಘಟನೆ ಆಶ್ರಯದಲ್ಲಿ ಪಂಜಿನ ಮೆರವಣಿಗೆ ಬಿ.ಸಿ.ರೋಡಿನಲ್ಲಿ ನಡೆಯಲಿದೆ.


ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಮಿತಿ ಸದಸ್ಯ ಬಿ.ಎಂ. ಪ್ರಭಾಕರ ದೈವಗುಡ್ಡೆ ಪತ್ರಿಕ ಪ್ರಕಟಣೆ ಮೂಲಕ ಈ ವಿಷಯ ತಿಳಿಸಿದ್ದಾರೆ.
ಮೆರವಣಿಗೆಯು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ಮುಖ್ಯ ವೃತ್ತದಿಂದ ಕೈಕಂಬ ಮೂಲಕ ಆಗಮಿಸಿ, ಬಿ.ಸಿ.ರೋಡ್ ಮಿನಿ ವಿಧಾನಸೌಧ ಎದುರು ಪ್ರತಿಭಟನಾ ಸಭೆ ನಡೆಯುವುದು.
ಬಂಟ್ವಾಳ ತಾಲೂಕಿನಲ್ಲೂ ಕೂಡಾ ಈ ಬಗ್ಗೆ ಚಳುವಳಿ ರೂಪಿಸುವ ಉದ್ದೇಶದಿಂದ ಬಿ.ಸಿ.ರೋಡಿನಲ್ಲಿ ಸಮಾನ ಮನಸ್ಕ ಸಂಘಟನೆಗಳು ಒಟ್ಟು ಸೇರಿ ಪಂಜಿನ ಮೆರವಣಿಗೆ ಕಾರ್ಯಕ್ರಮ ನಡೆಸಲು ತೀರ್ಮಾನ ಕೈಗೊಂಡಿವೆ ಸಭೆಯಲ್ಲಿ ಎಐಟಿಯುಸಿ ನಾಯಕರುಗಳಾದ ಬಿ.ಶೇಖರ್, ಸುರೇಶ್ ಕುಮಾರ್, ಸಿಐಟಿಯು ನಾಯಕರುಗಳಾದ ರಾಮಣ್ಣ ವಿಟ್ಲ , ಉದಯ ಕುಮಾರ್, ಎಚ್.ಎಂ.ಎಸ್.ನ ಮುಂದಾಳು ಬಿ.ಮೋಹನ, ಹಾರೂನ್ ರಶೀದ್, ಹಾಗೂ ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಂಘಟನೆಯ ಮುಂದಾಳು ಪ್ರಭಾಕರ ದೈವಗುಡ್ಡೆ , ರಾಜಾ ಚಂಡ್ತಿಮಾರ್, ಅಬ್ದುಲ್ ರಜಾಕ್ ಗುಂಪಕಲ್ಲು , ಹುಸೇನ್ ಪರ್ಲಿಯಾ ಉಪಸ್ಥಿತರಿದ್ದರು ಎಂದು ದೈವಗುಡ್ಡೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts