ಬಂಟ್ವಾಳ

ಕೇಂದ್ರ, ರಾಜ್ಯ ಸರ್ಕಾರಗಳ ನೀತಿ ವಿರೋಧಿಸಿ 30ರಂದು ಪಂಜಿನ ಮೆರವಣಿಗೆ

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಎಡ ಹಾಗೂ ಪ್ರಜಾಪ್ರಭುತ್ವ ಜಾತ್ಯಾತೀತ ಸಂಘಟನೆಗಳ ಆಶ್ರಯದಲ್ಲಿ ಅ.30 ರಂದು ಸಂಜೆ 6.30ರಿಂದ ರಾಷ್ಟ್ರವ್ಯಾಪಿ ಚಳುವಳಿಯ ಅಂಗವಾಗಿ ಸಮಾನಮನಸ್ಕ ಸಂಘಟನೆ ಆಶ್ರಯದಲ್ಲಿ ಪಂಜಿನ ಮೆರವಣಿಗೆ ಬಿ.ಸಿ.ರೋಡಿನಲ್ಲಿ ನಡೆಯಲಿದೆ.


ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಮಿತಿ ಸದಸ್ಯ ಬಿ.ಎಂ. ಪ್ರಭಾಕರ ದೈವಗುಡ್ಡೆ ಪತ್ರಿಕ ಪ್ರಕಟಣೆ ಮೂಲಕ ಈ ವಿಷಯ ತಿಳಿಸಿದ್ದಾರೆ.
ಮೆರವಣಿಗೆಯು ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣ ಗುರು ಮುಖ್ಯ ವೃತ್ತದಿಂದ ಕೈಕಂಬ ಮೂಲಕ ಆಗಮಿಸಿ, ಬಿ.ಸಿ.ರೋಡ್ ಮಿನಿ ವಿಧಾನಸೌಧ ಎದುರು ಪ್ರತಿಭಟನಾ ಸಭೆ ನಡೆಯುವುದು.
ಬಂಟ್ವಾಳ ತಾಲೂಕಿನಲ್ಲೂ ಕೂಡಾ ಈ ಬಗ್ಗೆ ಚಳುವಳಿ ರೂಪಿಸುವ ಉದ್ದೇಶದಿಂದ ಬಿ.ಸಿ.ರೋಡಿನಲ್ಲಿ ಸಮಾನ ಮನಸ್ಕ ಸಂಘಟನೆಗಳು ಒಟ್ಟು ಸೇರಿ ಪಂಜಿನ ಮೆರವಣಿಗೆ ಕಾರ್ಯಕ್ರಮ ನಡೆಸಲು ತೀರ್ಮಾನ ಕೈಗೊಂಡಿವೆ ಸಭೆಯಲ್ಲಿ ಎಐಟಿಯುಸಿ ನಾಯಕರುಗಳಾದ ಬಿ.ಶೇಖರ್, ಸುರೇಶ್ ಕುಮಾರ್, ಸಿಐಟಿಯು ನಾಯಕರುಗಳಾದ ರಾಮಣ್ಣ ವಿಟ್ಲ , ಉದಯ ಕುಮಾರ್, ಎಚ್.ಎಂ.ಎಸ್.ನ ಮುಂದಾಳು ಬಿ.ಮೋಹನ, ಹಾರೂನ್ ರಶೀದ್, ಹಾಗೂ ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಂಘಟನೆಯ ಮುಂದಾಳು ಪ್ರಭಾಕರ ದೈವಗುಡ್ಡೆ , ರಾಜಾ ಚಂಡ್ತಿಮಾರ್, ಅಬ್ದುಲ್ ರಜಾಕ್ ಗುಂಪಕಲ್ಲು , ಹುಸೇನ್ ಪರ್ಲಿಯಾ ಉಪಸ್ಥಿತರಿದ್ದರು ಎಂದು ದೈವಗುಡ್ಡೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ