ಪ್ರಧಾನಿ ಆಗಮನ: ಸಂಚಾರ ಮಾರ್ಪಾಡು

ಅ.29ರಂದು  ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು  ಧರ್ಮಸ್ಥಳಕ್ಕೆ ಆಗಮಿಸಿ ಅಲ್ಲಿಂದ ಉಜಿರೆಗೆ  ತೆರಳಿ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ  ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಬಳಿಕ ಅಲ್ಲಿಂದ ಧರ್ಮಸ್ಥಳಕ್ಕೆ ಬಂದು  ವಾಪಸಾಗುವ ಕಾರ್ಯಕ್ರಮ ಇರುವುದರಿಂದ  ಗಣ್ಯರ ಆಗಮನ ಮತ್ತು ಭದ್ರತೆಯ ಹಿತದೃಷ್ಠಿಯಿಂದ ಭಾನುವಾರ ರಂದು ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 2 ಗಂಟೆಯ ವರೇಗೆ ವಾಹನಗಳ   ಸಂಚಾರದಲ್ಲಿ  ಈ  ಕೆಳಗಿನ ಬದಲಾವಣೆಯನ್ನು ಮಾಡಲಾಗಿದೆ.

 ಮಂಗಳೂರಿನಿಂದ ಧರ್ಮಸ್ಥಳಕ್ಕೆ ಬರುವ ಎಲ್ಲಾ ವಾಹನಗಳು  ಮಂಗಳೂರು –ಬಿ.ಸಿ.ರೋಡು-ಉಪ್ಪಿನಂಗಡಿ-ನೆಲ್ಯಾಡಿ – ಪೆರಿಯಶಾಂತಿ-ಕೊಕ್ಕಡ-ನಿಡ್ಲೆ  ಮಾರ್ಗವಾಗಿ  ಧರ್ಮಸ್ಥಳಕ್ಕೆ ಬರುವುದು.

ಜಾಹೀರಾತು

  ಧರ್ಮಸ್ಥಳದಿಂದ ಮಂಗಳೂರು  ಕಡೆಗೆ ಹೋಗುವ ಎಲ್ಲಾ ವಾಹನಗಳು  ಧರ್ಮಸ್ಥಳ-  ನಿಡ್ಲೆ-ಕೊಕ್ಕಡ-ಪೆರಿಯಶಾಂತಿ-ನೆಲ್ಯಾಡಿ- ಉಪ್ಪಿನಂಗಡಿ ಮಾರ್ಗವಾಗಿ ಮಂಗಳೂರಿಗೆ ತೆರಳುವುದು. ಧರ್ಮಸ್ಥಳದಿಂದ ಉಜಿರೆ-ಚಾರ್ಮಾಡಿ–ಚಿಕ್ಕಮಗಳೂರು ಕಡೆಗೆ ಹೋಗುವ ವಾಹನಗಳು  ಧರ್ಮಸ್ಥಳ–ಪುದುವೆಟ್ಟು ಕ್ರಾಸ್- ಕಕ್ಕಿಂಜೆ- ಚಾರ್ಮಾಡಿ ಮಾರ್ಗವಾಗಿ ತೆರಳುವುದು.

ಚಿಕ್ಕಮಗಳೂರು ಕಡೆಯಿಂದ ದರ್ಮಸ್ಥಳಕ್ಕೆ ಬರುವ ವಾಹನಗಳು  ಮೂಡಿಗೆರೆ- ಚಾರ್ಮಾಡಿ-ಕಕ್ಕಿಂಜೆ- ಪುದುವೆಟ್ಟು ಕ್ರಾಸ್ ಮಾರ್ಗವಾಗಿ ಧರ್ಮಸ್ಥಳಕ್ಕೆ ಬರುವುದು. ಧರ್ಮಸ್ಥಳದಿಂದ  ಉಜಿರೆಗೆ ಹೋಗುವ ಎಲ್ಲಾ ವಾಹನಗಳು  ಧರ್ಮಸ್ಥಳ –ಪುದುವೆಟ್ಟು ಕ್ರಾಸ್- ಕಕ್ಕಿಂಜೆ ಮಾರ್ಗವಾಗಿ ಉಜಿರೆಗೆ ತೆರಳುವುದು.

   ಕಾರ್ಕಳ, ಮೂಡಬಿದಿರೆ, ವೇಣೂರು  ಕಡೆಗಳಿಂದ ಧರ್ಮಸ್ಥಳಕ್ಕೆ ಬರುವ ವಾಹನಗಳು ಗುರುವಾಯನಕೆರೆ-ಉಪ್ಪಿನಂಗಡಿ-ನೆಲ್ಯಾಡಿ-ಕೊಕ್ಕಡ ಮಾರ್ಗವಾಗಿ  ಧರ್ಮಸ್ಥಳಕ್ಕೆ ಬರುವುದು.     ಧರ್ಮಸ್ಧಳ, ಉಜಿರೆ ಪರಿಸರದಲ್ಲಿ  ಮತ್ತು  ಧರ್ಮಸ್ಧಳ ಉಜಿರೆ ರಸ್ತೆಯಲ್ಲಿ ಅ.29ರಂದು  ಬೆಳಿಗ್ಗೆಯಿಂದ ರಸ್ತೆಯ ಎರಡು ಬದಿಯಲ್ಲಿ ಯಾವುದೇ ವಾಹನಗಳನ್ನು ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.  ಯಾವುದಾದರೂ ವಾಹನಗಳನ್ನು ರಸ್ತೆ ಬದಿಯಲ್ಲಿ  ಪಾಕ್ ಮಾಡಿರುವುದು ಕಂಡು ಬಂದಲ್ಲಿ  ಸದ್ರಿ ವಾಹನಗಳನ್ನು ಟೋಯಿಂಗ್ ವಾಹನದ ಮೂಲಕ ಬೇರೆ ಸ್ಧಳಗಳಿಗೆ ಸ್ಧಳಾಂತರಿಸಲಾಗುವುದು.

ಸಾರ್ವಜನಿಕರಿಗೆ  ವಾಹನ ಪಾರ್ಕಿಂಗ್ ವ್ಯವಸ್ಧೆಯನ್ನು ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಧಾನದ ಬಳಿ ಮತ್ತು  ವಿ.ಐ.ಪಿ. ಪಾಸ್ ಹೊಂದಿರುವ ವಾಹನಗಳಿಗೆ ಬೆಳಾಲು ಕ್ರಾಸ್ ಬಳಿ ಪಾರ್ಕಿಂಗ್ ವ್ಯವಸ್ಧೆಯನ್ನು ಕಲ್ಪಿಸಲಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪ್ರಧಾನಿ ಆಗಮನ: ಸಂಚಾರ ಮಾರ್ಪಾಡು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*