ಜಿಲ್ಲಾ ಸುದ್ದಿ

ಪ್ರಧಾನಿ ಆಗಮನ: ಸಂಚಾರ ಮಾರ್ಪಾಡು

ಅ.29ರಂದು  ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು  ಧರ್ಮಸ್ಥಳಕ್ಕೆ ಆಗಮಿಸಿ ಅಲ್ಲಿಂದ ಉಜಿರೆಗೆ  ತೆರಳಿ ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ  ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಬಳಿಕ ಅಲ್ಲಿಂದ ಧರ್ಮಸ್ಥಳಕ್ಕೆ ಬಂದು  ವಾಪಸಾಗುವ ಕಾರ್ಯಕ್ರಮ ಇರುವುದರಿಂದ  ಗಣ್ಯರ ಆಗಮನ ಮತ್ತು ಭದ್ರತೆಯ ಹಿತದೃಷ್ಠಿಯಿಂದ ಭಾನುವಾರ ರಂದು ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 2 ಗಂಟೆಯ ವರೇಗೆ ವಾಹನಗಳ   ಸಂಚಾರದಲ್ಲಿ  ಈ  ಕೆಳಗಿನ ಬದಲಾವಣೆಯನ್ನು ಮಾಡಲಾಗಿದೆ.

 ಮಂಗಳೂರಿನಿಂದ ಧರ್ಮಸ್ಥಳಕ್ಕೆ ಬರುವ ಎಲ್ಲಾ ವಾಹನಗಳು  ಮಂಗಳೂರು –ಬಿ.ಸಿ.ರೋಡು-ಉಪ್ಪಿನಂಗಡಿ-ನೆಲ್ಯಾಡಿ – ಪೆರಿಯಶಾಂತಿ-ಕೊಕ್ಕಡ-ನಿಡ್ಲೆ  ಮಾರ್ಗವಾಗಿ  ಧರ್ಮಸ್ಥಳಕ್ಕೆ ಬರುವುದು.

ಜಾಹೀರಾತು

  ಧರ್ಮಸ್ಥಳದಿಂದ ಮಂಗಳೂರು  ಕಡೆಗೆ ಹೋಗುವ ಎಲ್ಲಾ ವಾಹನಗಳು  ಧರ್ಮಸ್ಥಳ-  ನಿಡ್ಲೆ-ಕೊಕ್ಕಡ-ಪೆರಿಯಶಾಂತಿ-ನೆಲ್ಯಾಡಿ- ಉಪ್ಪಿನಂಗಡಿ ಮಾರ್ಗವಾಗಿ ಮಂಗಳೂರಿಗೆ ತೆರಳುವುದು. ಧರ್ಮಸ್ಥಳದಿಂದ ಉಜಿರೆ-ಚಾರ್ಮಾಡಿ–ಚಿಕ್ಕಮಗಳೂರು ಕಡೆಗೆ ಹೋಗುವ ವಾಹನಗಳು  ಧರ್ಮಸ್ಥಳ–ಪುದುವೆಟ್ಟು ಕ್ರಾಸ್- ಕಕ್ಕಿಂಜೆ- ಚಾರ್ಮಾಡಿ ಮಾರ್ಗವಾಗಿ ತೆರಳುವುದು.

ಚಿಕ್ಕಮಗಳೂರು ಕಡೆಯಿಂದ ದರ್ಮಸ್ಥಳಕ್ಕೆ ಬರುವ ವಾಹನಗಳು  ಮೂಡಿಗೆರೆ- ಚಾರ್ಮಾಡಿ-ಕಕ್ಕಿಂಜೆ- ಪುದುವೆಟ್ಟು ಕ್ರಾಸ್ ಮಾರ್ಗವಾಗಿ ಧರ್ಮಸ್ಥಳಕ್ಕೆ ಬರುವುದು. ಧರ್ಮಸ್ಥಳದಿಂದ  ಉಜಿರೆಗೆ ಹೋಗುವ ಎಲ್ಲಾ ವಾಹನಗಳು  ಧರ್ಮಸ್ಥಳ –ಪುದುವೆಟ್ಟು ಕ್ರಾಸ್- ಕಕ್ಕಿಂಜೆ ಮಾರ್ಗವಾಗಿ ಉಜಿರೆಗೆ ತೆರಳುವುದು.

   ಕಾರ್ಕಳ, ಮೂಡಬಿದಿರೆ, ವೇಣೂರು  ಕಡೆಗಳಿಂದ ಧರ್ಮಸ್ಥಳಕ್ಕೆ ಬರುವ ವಾಹನಗಳು ಗುರುವಾಯನಕೆರೆ-ಉಪ್ಪಿನಂಗಡಿ-ನೆಲ್ಯಾಡಿ-ಕೊಕ್ಕಡ ಮಾರ್ಗವಾಗಿ  ಧರ್ಮಸ್ಥಳಕ್ಕೆ ಬರುವುದು.     ಧರ್ಮಸ್ಧಳ, ಉಜಿರೆ ಪರಿಸರದಲ್ಲಿ  ಮತ್ತು  ಧರ್ಮಸ್ಧಳ ಉಜಿರೆ ರಸ್ತೆಯಲ್ಲಿ ಅ.29ರಂದು  ಬೆಳಿಗ್ಗೆಯಿಂದ ರಸ್ತೆಯ ಎರಡು ಬದಿಯಲ್ಲಿ ಯಾವುದೇ ವಾಹನಗಳನ್ನು ಪಾರ್ಕಿಂಗ್ ಮಾಡುವುದನ್ನು ನಿಷೇಧಿಸಲಾಗಿದೆ.  ಯಾವುದಾದರೂ ವಾಹನಗಳನ್ನು ರಸ್ತೆ ಬದಿಯಲ್ಲಿ  ಪಾಕ್ ಮಾಡಿರುವುದು ಕಂಡು ಬಂದಲ್ಲಿ  ಸದ್ರಿ ವಾಹನಗಳನ್ನು ಟೋಯಿಂಗ್ ವಾಹನದ ಮೂಲಕ ಬೇರೆ ಸ್ಧಳಗಳಿಗೆ ಸ್ಧಳಾಂತರಿಸಲಾಗುವುದು.

ಸಾರ್ವಜನಿಕರಿಗೆ  ವಾಹನ ಪಾರ್ಕಿಂಗ್ ವ್ಯವಸ್ಧೆಯನ್ನು ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಧಾನದ ಬಳಿ ಮತ್ತು  ವಿ.ಐ.ಪಿ. ಪಾಸ್ ಹೊಂದಿರುವ ವಾಹನಗಳಿಗೆ ಬೆಳಾಲು ಕ್ರಾಸ್ ಬಳಿ ಪಾರ್ಕಿಂಗ್ ವ್ಯವಸ್ಧೆಯನ್ನು ಕಲ್ಪಿಸಲಾಗಿರುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

1 hour ago