ತಾಲ್ಲೂಕಿನ ಮಂಚಿ ಸಮೀಪದ ನಾಡಾಜೆ ಎಂಬಲ್ಲಿ ಮನೆಯೊಂದರ ಹಿಂಬದಿ ಬಾಗಿಲಿನ ಚಿಲಕ ಮುರಿದು ರೂ 3,22,500 ಮೌಲ್ಯದ ಚಿನ್ನಾಭರಣ ಮತ್ತು ರೂ 3,050 ಮೊತ್ತದ ನಗದು ಕಳ್ಳರು ದೋಚಿ ಪರಾರಿಯಾದ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಇಲ್ಲಿನ ನಿವಾಸಿ, ಕೃಷಿಕ ಮೋಹನ ಶೆಟ್ಟಿ ಎಂಬವರು ಎಂದಿನಂತೆ ಮನೆಯವರೊಂದಿಗೆ ಶುಕ್ರವಾರ ರಾತ್ರಿ ಮಲಗಿದ್ದ ವೇಳೆ ಮನೆಯ ಹಿಂಬಾಗಿಲಿನ ಚಿಲಕ ಮುರಿದು ಕಳ್ಳರು ಒಳಪ್ರವೇಶಿಸಿದ್ದಾರೆ. ಮನೆಯೊಳಗೆ ಕಪಾಟಿನಲ್ಲಿದ್ದ ವಿವಿಧ ಬಗೆಯ ಚಿನ್ನಾಭರಣ ಮತ್ತು ನಗದು ದೋಚಿ ಪರಾರಿಯಾಗಿರುವುದು ಶನಿವಾರ ಬೆಳಿಗ್ಗೆ ಎದ್ದು ನೋಡಿದಾಗಲೇ ಇವರ ಗಮನಕ್ಕೆ ಬಂದಿದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಚಿ: ಮನೆಗೆ ನುಗ್ಗಿ ರೂ 3ಲಕ್ಷಕ್ಕೂ ಮಿಕ್ಕಿ ಮೌಲ್ಯದ ಚಿನ್ನಾಭರಣ ಕಳವು"