ಸಂಪೂರ್ಣ ಪರಿಸರವನ್ನೇ ಹಾಳುಗೆಡಹುತ್ತಿರುವ ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸದ ಹೊರತು ಈ ಭೂಮಿಯನ್ನುಸುಸ್ಥಿ ತಿಯಲ್ಲಿಡುವುದು ಕಷ್ಟ ಸಾಧ್ಯ ಎಂದು ಎಂದು ಪಾಣೆಮಂಗಳೂರು ಎಸ್.ಎಲ್.ಎನ್.ಪಿ. ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ರಮಾ ಎಸ್ ಭಂಡಾರಿಯವರು ತಿಳಿಸಿದರು.
ಜಾಹೀರಾತು
ಪಾಣೆಮಂಗಳೂರು ಎಸ್.ಎಲ್.ಎನ್.ಪಿ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರ ಅನ್ನುವ ವಿಚಾರದ ಕುರಿತು ನಡೆದ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ನಿವೃತ್ತ ಪ್ರಾಧ್ಯಾಪಕ ಶ್ರೀ ರಾಜಮಣಿ ರಾಮಕುಂಜ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಈ ಸಂದರ್ಭ ಪ್ಲಾಸ್ಟಿಕ್ ಮುಕ್ತ ಪರಿಸರ ಘೋಷಣೆಯೊಂದಿಗೆ ಶಿಕ್ಷಕ ಶಿಕ್ಷಕಿಯರು ಹಾಗೂ ವಿದ್ಯಾರ್ಥಿ ವೃಂದ ಪರಿಸರ ಸ್ವಚ್ಛಗೊಳಿಸುವ ಸಂಕಲ್ಪತೊಟ್ಟರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪ್ಲಾಸ್ಟಿಕ್ ಮುಕ್ತ ಪರಿಸರಕ್ಕೆ ಪ್ರತಿಜ್ಞೆ"