ವಿಟ್ಲ ತಾಳಮದ್ದಳೆ ಸಪ್ತಾಹ ಸಮಾರೋಪ

ಉಜಿರೆಯ ಕುರಿಯ ವಿಟ್ಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ನೇತೃತ್ವದಲ್ಲಿ ಕಾಸರಗೋಡು ಶೇಣಿ ಜಂಗಮದ ಸಹಭಾಗಿತ್ವದಲ್ಲಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಕುರಿಯ ಪ್ರತಿಷ್ಠಾನ ವಿಂಶತಿ – ಶೇಣಿ ಶತಕ ಸರಣಿ ಅಂಗವಾಗಿ ಆಯೋಜಿಸಿದ ತಾಳಮದ್ದಳೆ ಸಪ್ತಾಹ, ಬಯಲಾಟದ ಸಂದರ್ಭ ವಿಟ್ಲ ಭಗವತೀ ದೇವಸ್ಥಾನದ ಸಭಾಂಗಣದಲ್ಲಿ ರಸಋಷಿ ದೇರಾಜೆ ಸಭಾಂಗಣ-ರಸಿಕರತ್ನ ವಿಟ್ಲ ಜೋಷಿ ವೇದಿಕೆಯಲ್ಲಿ ಸಪ್ತಾಹದ ಸಮಾರೋಪ ಸಮಾರಂಭ ಮತ್ತು ಇಬ್ಬರಿಗೆ ಸಮ್ಮಾನ ಹಾಗೂ ಬಯಲಾಟ ನಡೆಯಿತು.

ಜಾಹೀರಾತು

ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್ ಸಮಾರೋಪ ಭಾಷಣ ಮಾಡಿದರು. ಪ್ರತಿಷ್ಠಾನದ ಪರವಾಗಿ ಕಲಾಪೋಷಕರು, ಸಂಘಟಕರಾದ ಶಾಂತಾರಾಮ ಕುಡ್ವ ಮತ್ತು ಸದಾಶಿವ ರಾವ್ ನೆಲ್ಲಿಮಾರು ಅವರನ್ನು ಸಮ್ಮಾನಿಸಲಾಯಿತು.

ಮೇಲುಕೋಟೆ ಸಂಸ್ಕೃತ ಕಾಲೇಜಿನ ಪ್ರಾಚಾರ್ಯ, ಅರ್ಥಧಾರಿ ಉಮಾಕಾಂತ್ ಭಟ್ ಕೆರೆಕೈ, ಹರೀಶ್ ಜೋಷಿ ವಿಟ್ಲ, ವಿಟ್ಲ ಭಗವತೀ ದೇವಸ್ಥಾನದ ಮೊಕ್ತೇಸರ ಕೇಶವ ಆರ್.ವಿ., ಮೋನಪ್ಪ ಗುರುಸ್ವಾಮಿ, ಕನ್ಯಾನ ಬೆನಕ ಸ್ಟುಡಿಯೋ ಮಾಲಕ ವಿ.ಕುಮಾರಸ್ವಾಮಿ ಕನ್ಯಾನ, ಎಂ.ನಾ.ಚಂಬಲ್ತಿಮಾರು, ವಿಟ್ಲ ಭಾರತ್ ಶಾಮಿಯಾನ ಮಾಲಕ ಡಿ.ಸಂಜೀವ ಪೂಜಾರಿ, ಮೋಹನ ಮೊದಲಾದವರು ಉಪಸ್ಥಿತರಿದ್ದರು.

ಕುರಿಯ ಪ್ರತಿಷ್ಠಾನದ ಸಂಚಾಲಕ ಉಜಿರೆ ಎನ್.ಅಶೋಕ ಭಟ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಕೂಡ್ಲು ಶೇಣಿ ರಂಗಜಂಗಮದ ಸಂಚಾಲಕ ಶೇಣಿ ವೇಣುಗೋಪಾಲ ಭಟ್ ಸಹಕರಿಸಿದರು.

ನಿಮಿಯಜ್ಞ – ಯಕ್ಷಗಾನ ತಾಳಮದ್ದಳೆಯಲ್ಲಿ ಕಲಾವಿದರಾಗಿ ಸುಬ್ರಾಯ ಸಂಪಾಜೆ, ಬಿ.ಸೀತಾರಾಮ ತೋಳ್ಪಾಡಿತ್ತಾಯ, ಬಿ.ಜನಾರ್ದನ ತೋಳ್ಪಾಡಿತ್ತಾಯ, ಉಮಾಕಾಂತ್ ಭಟ್ ಕೆರೆಕೈ, ರಾಧಾಕೃಷ್ಣ ಕಲ್ಚಾರ್, ಹರೀಶ ಬಳಂತಿಮೊಗರು, ಶ್ರೀರಮಣ ಆಚಾರ್ ಅವರು ಭಾಗವಹಿಸಿದ್ದರು. ಬಳಿಕ ಇಂದ್ರಜಿತು ಎಂಬ ಯಕ್ಷಗಾನ ಬಯಲಾಟದಲ್ಲಿ ಕಲಾವಿದರಾದ ಪುತ್ತಿಗೆ ರಘುರಾಮ ಹೊಳ್ಳ, ಎಂ.ಲಕ್ಷ್ಮೀಶ ಅಮ್ಮಣ್ಣಾಯ, ಅಡೂರು ಗಣೇಶ ರಾವ್, ರಾಮಚಂದ್ರ ಭಟ್ ಎಲ್ಲೂರು, ರಂಜಿತಾ ಎಲ್ಲೂರು, ಪೂರ್ಣಿಮಾ ಶಾಸ್ತ್ರಿ, ವನಿತಾ ಭಟ್ ಎಲ್ಲೂರು, ರಕ್ಷಿತಾ ಎಲ್ಲೂರು, ಪ್ರಕೃತಿ, ನಿಶಾ ಭಾಗವಹಿಸಿದ್ದರು.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ವಿಟ್ಲ ತಾಳಮದ್ದಳೆ ಸಪ್ತಾಹ ಸಮಾರೋಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*