ವಿಟ್ಲ ತಾಳಮದ್ದಳೆ ಸಪ್ತಾಹ ಸಮಾರೋಪ

ಉಜಿರೆಯ ಕುರಿಯ ವಿಟ್ಠಲ ಶಾಸ್ತ್ರಿ ಯಕ್ಷಗಾನ ಪ್ರತಿಷ್ಠಾನದ ನೇತೃತ್ವದಲ್ಲಿ ಕಾಸರಗೋಡು ಶೇಣಿ ಜಂಗಮದ ಸಹಭಾಗಿತ್ವದಲ್ಲಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಕುರಿಯ ಪ್ರತಿಷ್ಠಾನ ವಿಂಶತಿ – ಶೇಣಿ ಶತಕ ಸರಣಿ ಅಂಗವಾಗಿ ಆಯೋಜಿಸಿದ ತಾಳಮದ್ದಳೆ ಸಪ್ತಾಹ, ಬಯಲಾಟದ ಸಂದರ್ಭ ವಿಟ್ಲ ಭಗವತೀ ದೇವಸ್ಥಾನದ ಸಭಾಂಗಣದಲ್ಲಿ ರಸಋಷಿ ದೇರಾಜೆ ಸಭಾಂಗಣ-ರಸಿಕರತ್ನ ವಿಟ್ಲ ಜೋಷಿ ವೇದಿಕೆಯಲ್ಲಿ ಸಪ್ತಾಹದ ಸಮಾರೋಪ ಸಮಾರಂಭ ಮತ್ತು ಇಬ್ಬರಿಗೆ ಸಮ್ಮಾನ ಹಾಗೂ ಬಯಲಾಟ ನಡೆಯಿತು.

ಜಾಹೀರಾತು

ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್ ಸಮಾರೋಪ ಭಾಷಣ ಮಾಡಿದರು. ಪ್ರತಿಷ್ಠಾನದ ಪರವಾಗಿ ಕಲಾಪೋಷಕರು, ಸಂಘಟಕರಾದ ಶಾಂತಾರಾಮ ಕುಡ್ವ ಮತ್ತು ಸದಾಶಿವ ರಾವ್ ನೆಲ್ಲಿಮಾರು ಅವರನ್ನು ಸಮ್ಮಾನಿಸಲಾಯಿತು.

ಮೇಲುಕೋಟೆ ಸಂಸ್ಕೃತ ಕಾಲೇಜಿನ ಪ್ರಾಚಾರ್ಯ, ಅರ್ಥಧಾರಿ ಉಮಾಕಾಂತ್ ಭಟ್ ಕೆರೆಕೈ, ಹರೀಶ್ ಜೋಷಿ ವಿಟ್ಲ, ವಿಟ್ಲ ಭಗವತೀ ದೇವಸ್ಥಾನದ ಮೊಕ್ತೇಸರ ಕೇಶವ ಆರ್.ವಿ., ಮೋನಪ್ಪ ಗುರುಸ್ವಾಮಿ, ಕನ್ಯಾನ ಬೆನಕ ಸ್ಟುಡಿಯೋ ಮಾಲಕ ವಿ.ಕುಮಾರಸ್ವಾಮಿ ಕನ್ಯಾನ, ಎಂ.ನಾ.ಚಂಬಲ್ತಿಮಾರು, ವಿಟ್ಲ ಭಾರತ್ ಶಾಮಿಯಾನ ಮಾಲಕ ಡಿ.ಸಂಜೀವ ಪೂಜಾರಿ, ಮೋಹನ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು

ಕುರಿಯ ಪ್ರತಿಷ್ಠಾನದ ಸಂಚಾಲಕ ಉಜಿರೆ ಎನ್.ಅಶೋಕ ಭಟ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಕೂಡ್ಲು ಶೇಣಿ ರಂಗಜಂಗಮದ ಸಂಚಾಲಕ ಶೇಣಿ ವೇಣುಗೋಪಾಲ ಭಟ್ ಸಹಕರಿಸಿದರು.

ನಿಮಿಯಜ್ಞ – ಯಕ್ಷಗಾನ ತಾಳಮದ್ದಳೆಯಲ್ಲಿ ಕಲಾವಿದರಾಗಿ ಸುಬ್ರಾಯ ಸಂಪಾಜೆ, ಬಿ.ಸೀತಾರಾಮ ತೋಳ್ಪಾಡಿತ್ತಾಯ, ಬಿ.ಜನಾರ್ದನ ತೋಳ್ಪಾಡಿತ್ತಾಯ, ಉಮಾಕಾಂತ್ ಭಟ್ ಕೆರೆಕೈ, ರಾಧಾಕೃಷ್ಣ ಕಲ್ಚಾರ್, ಹರೀಶ ಬಳಂತಿಮೊಗರು, ಶ್ರೀರಮಣ ಆಚಾರ್ ಅವರು ಭಾಗವಹಿಸಿದ್ದರು. ಬಳಿಕ ಇಂದ್ರಜಿತು ಎಂಬ ಯಕ್ಷಗಾನ ಬಯಲಾಟದಲ್ಲಿ ಕಲಾವಿದರಾದ ಪುತ್ತಿಗೆ ರಘುರಾಮ ಹೊಳ್ಳ, ಎಂ.ಲಕ್ಷ್ಮೀಶ ಅಮ್ಮಣ್ಣಾಯ, ಅಡೂರು ಗಣೇಶ ರಾವ್, ರಾಮಚಂದ್ರ ಭಟ್ ಎಲ್ಲೂರು, ರಂಜಿತಾ ಎಲ್ಲೂರು, ಪೂರ್ಣಿಮಾ ಶಾಸ್ತ್ರಿ, ವನಿತಾ ಭಟ್ ಎಲ್ಲೂರು, ರಕ್ಷಿತಾ ಎಲ್ಲೂರು, ಪ್ರಕೃತಿ, ನಿಶಾ ಭಾಗವಹಿಸಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಟ್ಲ ತಾಳಮದ್ದಳೆ ಸಪ್ತಾಹ ಸಮಾರೋಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*