ಬಂಟ್ವಾಳ

ಭಾಷೆಗೆ ಎಲ್ಲ ಸಮುದಾಯದವರ ಒಂದುಗೂಡಿಸುವ ಶಕ್ತಿ: ಪ್ರೊ. ವಿಷ್ಣು ಭಟ್

ಭಾಷೆಯು ಹರಿಯುತ್ತಿರುವ ನೀರಿನಂತೆ ಎಲ್ಲ ಸಮುದಾಯದವರನ್ನು ಒಂದುಗೂಡಿಸುವ ಶಕ್ತಿ ಹೊಂದಿದೆ ಎಂದು ಪತ್ತೂರು ಸಂತ ಫಿಲೋಮಿನ ಕಾಲೇಜಿನ ವಿಶ್ರಾಂತ ಉಪಪ್ರಾಂಶುಪಾಲ ಮತ್ತು ಹಿಂದಿ ಉಪನ್ಯಾಸಕ ಪ್ರೋ. ವಿಷ್ಣು ಭಟ್ ಹೇಳಿದರು.


ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪ.ಪ. ಕಾಲೇಜು ಹಿಂದಿ ಸಂಘದ ಆಶ್ರಯದಲ್ಲಿ ಉಪನ್ಯಾಸ ಕಾರ್‍ಯಕ್ರಮದಲ್ಲಿ ಮಾತನಾಡಿದರು.
ಉದ್ಯೋಗಕ್ಷೇತ್ರ ಮತ್ತು ಶಿಕ್ಷಣಕ್ಷೇತ್ರದಲ್ಲಿ ಮುನ್ನಡೆಯಲು ಭಾಷೆಯ ಜ್ಞಾನ ಅಗತ್ಯ. ವಿದ್ಯಾರ್ಥಿ ರಾಷ್ಟ್ರ ಭಾಷೆಯಾದ ಹಿಂದಿಯನ್ನು ಅವಶ್ಯವಿರುವ ಕಡೆ ಬಳಸಿ ಸದುಪಯೋಗ ಪಡೆದುಕೊಳ್ಳಬೇಕು. ಭಾಷಾ ಶಿಕ್ಷಣವನ್ನು ಪಡೆಯುವುದರ ಜತೆ ಮೌಲ್ಯಯುತ ಸಮಾಜ ನಿರ್ಮಾಣಕ್ಕೆ ಪಣತೊಡಬೇಕು. ಆ ಮೂಲಕ ವಿದ್ಯಾರ್ಥಿಯ ಸರ್ವಾಂಗೀಣ ಪ್ರಗತಿಗೆ ಪ್ರೇರಣೆಯಾಗುತ್ತದೆ ಎಂದು ಹೇಳಿದರು.
ಎಸ್.ವಿ.ಎಸ್. ಪ.ಪ. ಕಾಲೇಜು ಪ್ರಾಂಶುಪಾಲೆ ಶಶಿಕಲಾ ಕೆ. ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿ ಓದುವ ಹವ್ಯಾಸ ಬೆಳೆಸಿ ಜೀವನದಲ್ಲಿ ಉತ್ತಮ ನಡವಳಿಕೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಎಸ್.ವಿ.ಎಸ್. ಪ.ಪ. ಕಾಲೇಜು ಹಿಂದಿ ಉಪನ್ಯಾಸಕಿ ಮತ್ತು ಹಿಂದಿ ಸಂಘದ ಅಧ್ಯಕ್ಷೆ ದಿವ್ಯಲಕ್ಷ್ಮೀ ಸಂಪತ್ ರೈ ಅತಿಥಿ ಪರಿಚಯಸಿ ಪ್ರಾಸ್ತಾವಿಕ ಮಾತನಾಡಿದರು. ಹಿಂದಿ ಉಪನ್ಯಾಸಕಿ ಹಾಗೂ ಹಿಂದಿ ಸಂಘದ ಸಲಹೆಗಾರೆ ಬಬಿತಾ ಸವಿತಾ ಕ್ರಾಸ್ತಾ ಸಹಕರಿಸಿದರು. ವಿದ್ಯಾರ್ಥಿನಿ ವೈಷ್ಣವಿ ವಿ. ಶೆಣೈ ಸ್ವಾಗತಿಸಿ, ಗ್ವಾಡ್ವಿನ್ ಥೋಮಸ್ ಡಿ’ಸೋಜ ವಂದಿಸಿದರು. ವಿದ್ಯಾರ್ಥಿನಿ ಮೇಘನಾ ಶೆಣೈ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ