ಸಾಮರಸ್ಯಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಪೂರಕ: ಸದಾಶಿವ ಬಂಗೇರ

ಜಾತಿ ಮತ ಭೇದವಿಲ್ಲದೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಮೂಲಕ ಸಾಧ್ಯವಾಗುತ್ತದೆ. ಪರಸ್ಪರ ಸಾಮರಸ್ಯ ಇಂದಿನ ಅವಶ್ಯಕತೆಯಾಗಿದ್ದು ಯುವ ಜನತೆ ವಿದ್ಯಾಭ್ಯಾಸದ ಜೊತೆಗೆ ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಬಂಗೇರ ಹೇಳಿದರು.

ಅಗ್ರಾರ್ ಚರ್ಚ್ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬಿ.ಮೂಡದ ವಿದ್ಯಾರ್ಥಿಗಳ ವಾರ್ಷಿಕ ವಿಶೇಷ ಎನ್.ಎಸ್.ಎಸ್. ಶಿಬಿರದ ಸಮಾರೋಪ ಸಮಾರಂಭದಲ್ಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಜಾಹೀರಾತು

ಅಗ್ರಾರ್ ಚರ್ಚ್‌ನ ಧರ್ಮಗುರು ಗ್ರೆಗೊರಿ ಡಿ’ಸೋಜ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಅಶಾಂತಿ ಅಸಹಿಷ್ಣುತೆಯಿಂದ ತುಂಬಿದ ಸಮಾಜದಲ್ಲಿ ಉಪ್ಪಿನಂತೆ ಬೆರೆತು ಎಲ್ಲರಿಗೂ ಬೇಕಾದವರಾಗಬೇಕು. ಬೆಳಕಿನಂತೆ ಬೇರೆಯವರಿಗೂ ದಾರಿ ತೋರಿಸಿ ಸರಿ ದಾರಿಯಲ್ಲಿ ನಡೆಯಬೇಕು. ಕಲಿತ ಜ್ಞಾನವನ್ನು ಇನ್ನೊಬ್ಬರಿಗೆ ಹಂಚುವ ಮೂಲಕ ಎಲ್ಲರ ಬದುಕಿನಲ್ಲಿ ಸಂತಸ ನೆಲೆಯಾಗಲು ಸಹಕರಿಸಬೇಕು ಎಂದು ಶುಭ ಹಾರೈಸಿದರು.

ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್ ಎಲ್ ರೊಡ್ರಿಗಸ್, ಪುರಸಭಾ ಸದಸ್ಯೆ ವಸಂತಿ ಚಂದಪ್ಪ, ಶಿಕ್ಷಣ ಸಂಯೋಜಕ ಶ್ರೀಕಾಂತ್ ಎಮ್, ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ, ಕ್ಯಾಥೊಲಿಕ್ ಸಭಾಧ್ಯಕ್ಷ ಆಂಟನಿ ಸಿಕ್ವೇರಾ, ಉದ್ಯಮಿಗಳಾದ ಪಿ.ಜೆ.ರೊಡ್ರಿಗಸ್ , ಲೈನಲ್ ಪಿರೇರಾ, ಅಲ್ಫೋನ್ಸ್ ಮಿನೇಜಸ್ ,ವಿನ್ಸೆಂಟ್ ಕಾರ್ಲೊ ಉಪಸ್ಥಿತರಿದ್ದರು.

ಕಾಲೇಜಿನ ಪ್ರಭಾರ ಪ್ರಿನ್ಸಿಪಾಲ್ ಯುಸೂಫ್ ಸ್ವಾಗತಿಸಿ, ಉಪನ್ಯಾಸಕ ಅಬ್ದುಲ್ ರಝಾಕ್ ನಿರೂಪಿಸಿ ,ಸಹ ಶಿಬಿರಾಧಿಕಾರಿ ಬಾಲಕೃಷ್ಣ ಬೆಳ್ಳಾರೆ ವಂದಿಸಿರು. ಶಿಬಿರಾರ್ಥಿಗಳಾದ ಚೈತ್ರ, ವಿನೊದ್ , ಪ್ರಮೋದ್ ,ಜೆಸಿಲಾ ಪರ್ವಿನ್, ಗೌಸಿಯಾ ಶಿಬಿರದ ಅನಿಸಿಕೆ ವ್ಯಕ್ತ ಪಡಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾಮರಸ್ಯಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಪೂರಕ: ಸದಾಶಿವ ಬಂಗೇರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*