ನವಕರ್ನಾಟಕ ನಿರ್ಮಿಸಲು ಬಿಜೆಪಿ ಸಂಕಲ್ಪ: ನಳಿನ್ ಕುಮಾರ್ ಕಟೀಲ್

www.bantwalnews.com

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಜನತಾ ಪ್ರಭುವಿನ ಬಳಿ, ನಾಲ್ಕು ವರ್ಷಗಳ ಸಿದ್ದರಾಮಯ್ಯ ಆಡಳಿತ ವೈಫಲ್ಯ ಮುಂದಿಟ್ಟು ಜನರ ಆಶೀರ್ವಾದ ಬೇಡುವುದಕ್ಕೋಸ್ಕರ ಮುಂದಿನ ಚುನಾವಣೆಯಲ್ಲಿ ನವಕರ್ನಾಟಕ ನಿರ್ಮಾಣಕ್ಕೆ ಬಿಜೆಪಿ ವತಿಯಿಂದ ಪರಿವರ್ತನಾ ಯಾತ್ರೆ ನಡೆಯುತ್ತದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಜಾಹೀರಾತು

ಬಿ.ಸಿ.ರೋಡಿನ ಬಂಟ್ವಾಳ ಬಿಜೆಪಿ ಕಚೇರಿ ಎದುರು ನವಕರ್ನಾಟಕ ಯಾತ್ರೆ ನಿಮಿತ್ತ ಬಿ.ಸಿ.ರೋಡಿನಿಂದ ಬೆಂಗಳೂರಿಗೆ ತೆರಳುವ ಬೈಕ್ ರ್‍ಯಾಲಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ.2ರಂದು ರಾಜ್ಯಾಧ್ಯಕ್ಷ ಯಡಿಯೂರಪ್ಪ ಧ್ವಜ ಹಸ್ತಾಂತರ ಮಾಡುವ ಮೂಲಕ ರಾಜ್ಯಾದ್ಯಂತ ಯಾತ್ರೆಗೆ ಚಾಲನೆ ದೊರಕಲಿದೆ, ಯಡಿಯೂರಪ್ಪ ಅವರ ಕೈಬಲಪಡಿಸಲು ಜಿಲ್ಲೆಯಿಂದ ಯಾತ್ರೆ ಹೊರಟಿದೆ ಎಂದರು.

ದ.ಕ.ಜಿಲ್ಲೆಯಿಂದ ಬಂಟ್ವಾಳವನ್ನು ಯಾತ್ರೆಗೆಂದು ಆಯ್ಕೆ ಮಾಡಲಾಗಿದೆ. ಇದಕ್ಕೆ ಎರಡು ಕಾರಣಗಳಿವೆ. ಒಂದು ಇದು ಎಲ್ಲದಕ್ಕೂ ಕೇಂದ್ರವಾದರೆ, ಮತ್ತೊಂದು ಇದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರ ಕ್ಷೇತ್ರ ಎಂದು ಹೇಳಿದ ನಳಿನ್, ಸಚಿವರ ಕಾರ್ಯವೈಖರಿ ಮತ್ತು ಸಿದ್ದರಾಮಯ್ಯನವರ ಜನವಿರೋಧಿ ನೀತಿಗೆ ಉತ್ತರವಾಗಿ ಬಂಟ್ವಾಳದಿಂದ ಯಾತ್ರೆ ಆರಂಭಗೊಳ್ಳುತ್ತಿದೆ ಎಂದರು.

ದ.ಕ.ದಿಂದ2 ಸಾವಿರ ಕಾರ್ಯಕರ್ತರು:

ಪ್ರತಿ ಮತಗಟ್ಟೆಯಿಂದ ಆರು ಯುವ ಕಾರ್ಯಕರ್ತರು ಬೆಂಗಳೂರಿಗೆ ಸಂಕಲ್ಪ ಯಾತ್ರೆಗೆ ಯಡಿಯೂರಪ್ಪ ಜೊತೆ ನಾವಿದ್ದೇವೆ ಎಂಬ ಬೆಂಬಲ ಸೂಚಕವಾಗಿ ತೆರಳಲಿದ್ದಾರೆ. ಈಗಾಗಲೇ ಒಂದು ಸಾವಿರ ಬೈಕುಗಳಲ್ಲಿ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಿಂದ ಹೊರಟಿದ್ದಾರೆ. ಪರಿವರ್ತನಾ ಯಾತ್ರೆ ನಾಳೆ ಪ್ರಾರಂಭವಾದರೆ 72 ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಮಾಡುತ್ತಾರೆ. ಅದಾದ ಬಳಿಕ ರಾಜ್ಯದಲ್ಲಿ ಪರಿವರ್ತನೆಯ ಅಲೆ ಏಳುತ್ತದೆ. ಮತದಾರರು ಚುನಾವಣೆ ಎದುರು ನೋಡುತ್ತಿದ್ದಾರೆ. ಜನವಿರೋಧಿ ಸಿದ್ದರಾಮಯ್ಯ ಸರಕಾರ ಹೊಡೆದುರುಳಿಸಬೇಕು ಎಂಬ ಸಂಕಲ್ಪ ಜನರಿಗಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಆಶಯ ಜನರಿಗಿದೆ. ಪರಿವರ್ತನಾ ಯಾತ್ರೆ ಕೊನೆಯಲ್ಲಿ ಈ ಆಶಯಗಳು ಯಶಸ್ವಿಯಾಗುತ್ತದೆ ಎಂಬ ನಂಬಿಕೆ ವ್ಯಕ್ತಪಡಿಸಿದರು.

ಈ ಸಂದರ್ಭ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಪ್ರಮುಖ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಹವಕ್ತಾರೆ ಸುಲೋಚನಾ ಜಿ.ಕೆ.ಭಟ್, ಕ್ಷೇತ್ರಾಧ್ಯಕ್ಷ ದೇವದಾಸ್ ಶೆಟ್ಟಿ, ರಾಮದಾಸ ಬಂಟ್ವಾಳ, ಪ್ರಮುಖರಾದ ಸತ್ಯಜಿತ್ ಸುರತ್ಕಲ್, ಸತೀಶ ಕುಂಪಲ, ಜಿ.ಆನಂದ, ದಿನೇಶ ಭಂಡಾರಿ, ರಾಮದಾಸ ಬಂಟ್ವಾಳ, ಎ.ಗೋವಿಂದ ಪ್ರಭು, ರಮಾನಾಥ ರಾಯಿ, ಪದ್ಮನಾಭ ಮಯ್ಯ, ಯಶೋಧರ ಕರ್ಬೆಟ್ಟು, ವಜ್ರನಾಥ ಕಲ್ಲಡ್ಕ ಸಹಿತ ಪಕ್ಷ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ನವಕರ್ನಾಟಕ ನಿರ್ಮಿಸಲು ಬಿಜೆಪಿ ಸಂಕಲ್ಪ: ನಳಿನ್ ಕುಮಾರ್ ಕಟೀಲ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*