ಬಂಟ್ವಾಳ

ಕನ್ನಡ ಮನೆ- ಮನ ಭಾಷೆಯಾಗಲಿ: ಪುರಂದರ ಹೆಗ್ಡೆ

www.bantwalnews.com

ಕನ್ನಡ ಕೇವಲ ವ್ಯವಹಾರಿಕ ಭಾಷೆಯಾಗದೇ, ಕನ್ನಡಿಗರ ಮನ- ಮನೆ ಭಾಷೆಯಾಗಬೇಕು ಎಂದು ತಹಶೀಲ್ದಾರ್ ಪುರಂದರ ಹೆಗ್ಡೆ ಅವರು ಹೇಳಿದರು.

ಜಾಹೀರಾತು


‌ಬಂಟ್ವಾಳ ತಾಲೂಕು ಕನ್ನಡ ರಾಜ್ಯೋತ್ಸವದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡ ನಾಡು-ನುಡಿಗೆ ಶ್ರಮಿಸಿದ ಅನೇಕ ಹಿರಿಯರನ್ನು ಸ್ಮರಿಸುವ ಕಾರ್ಯ ಆಗಬೇಕು ಎಂದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಮೆಸ್ಕಾಂ ಪ್ರತಿನಿಧಿ ವೆಂಕಪ್ಪ ಪೂಜಾರಿ, ಬಿಇಒ ಶಿವಪ್ರಕಾಶ್, ತಾ.ಪಂ. ಇಒ ಸಿಪ್ರಿಯಂ ಮಿರಾಂದ, ಶಿಶು ಯೋಜನಾಧಿಕಾರಿ ಸುಧಾ ಜೋಷಿ, ಉಪ ತಹಶೀಲ್ದಾರ್ ಗಳಾದ ವಾಸು ಶೆಟ್ಟಿ, ಗೋಪಾಲ್, ಸೀತಾರಾಂ, ಗ್ರೆಟ್ಟಾ ಮಸ್ಕರೇಂಜಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾರಾಯಣ ಗೌಡ ಪ್ರಧಾನ ಭಾಷಣ ಗೈದರು. ಮಂಜು ವಿಟ್ಲ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ದಿವಾಕರ ಮುಗುಳಿಯ, ನವೀನ್ ಬೆಂಜನಪದವು, ತಾಲೂಕು ಆಡಳಿತ ಶಾಖೆಯ ಸೀತಾರಾಮ ಕಮ್ಮಾಜೆ, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಹಾಜರಿದ್ದರು  ಕಾರ್ಯಕ್ರಮದ ಬಳಿಕ ಪುರಸಭಾ ವ್ಯಾಪ್ತಿಯ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತಾ.ಪಂ. ಇಓ ಸಿಪ್ರಿಯಂ ಮಿರಾಂದ, ಕಲಾವಿದ ಮಂಜು ವಿಟ್ಲ ಅವರನ್ನು ಸನ್ಮಾನಿಸಲಾಯಿತು.

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts