ವಿಟ್ಲ

ಮತದಾರ ಬಾಂಧವರ ಋಣ ತೀರಿಸುವ ಕಾರ್ಯ: ರೈ

ಬಂಟ್ವಾಳನ್ಯೂಸ್

ಇತರರು ಮಾಡಿದ ಅಭಿವೃದ್ಧಿ ಕೆಲಸಗಳನ್ನು ನನ್ನದು ಎಂದು ಹೇಳಲಿಲ್ಲ. ಕ್ಷೇತ್ರದ ಮತದಾರರಿಗೆ ಅಗೌರವ ಉಂಟುಮಾಡಲಿಲ್ಲ. ಸ್ವಚ್ಛ ಹಾಗೂ ಪ್ರಾಮಾಣಿಕ ಕರ್ತವ್ಯ ನಿರ್ವಹಿಸಿದ್ದೇನೆ. ಅಭಿವೃದ್ಧಿ ಕಾರ್ಯಗಳ ಮೂಲಕ ನ್ಯಾಯ ಒದಗಿಸಿದ್ದೇನೆ. ಅಭಿವೃದ್ಧಿ ಮತದಾರ ಬಾಂಧವರ ಋಣ ತೀರಿಸುವ ಕಾರ್ಯ ಮಾಡಿದ್ದೇನೆ.

ಜಾಹೀರಾತು

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಂಟ್ವಾಳದ ನಾನಾ ಕಡೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಬಳಿಕ ಹೇಳಿದ್ದು ಹೀಗೆ.

ಸಚಿವ ಬಿ. ರಮಾನಾಥ ರೈ ಕಾಡಬೆಟ್ಟು-ಬಸ್ತಿಕೋಡಿ ರಸ್ತೆ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಿದರು.

ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ್ದಾರೆ.

ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ , ಬಂಟ್ವಾಳ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳಿಗಾಗಿ 6 ಯೋಜನೆಗಳು ಈಗಾಗಲೆ ಮಂಜೂರುಗೊಂಡಿದ್ದು, ಟೆಂಡರು ಪ್ರಕ್ರಿಯೆ ಮುಗಿದಿದ್ದು ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ. ಇನ್ನೂ 2 ಯೋಜನೆಗಳು ಮಂಜೂರಾತಿ ಹಂತದಲ್ಲಿದೆ ಎಂದರು.

ಜಾಹೀರಾತು

ಮೂರ್ಜೆನೇರಳಕಟ್ಟೆ ರಸ್ತೆಗೆ 1.8 ಕೋ. ರೂ., ಕಾಡಬೆಟ್ಟುಬಸ್ತಿಕೋಡಿ ರಸ್ತೆಗೆ 3.45 ಕೋ.ರೂ.,  ಕರಿಮಲೆಅಣ್ಣಳಿಕೆ ರಸ್ತೆಗೆ 4 ಕೋ. ರೂ. , ಬಿ.ಸಿ.ರೋಡ್ ಜಂಕ್ಷನ್ಪಾಣೆಮಂಗಳೂರು ವೃತ್ತ ರಸ್ತೆಗೆ 3.5 ಕೋ. ರೂ., ಗೋಳ್ತಮಜಲುಮಂಚಿ ರಸ್ತೆಗೆ ಕೋ.ರೂ. , ಕೊಳ್ನಾಡು ಗ್ರಾಮದ ಅಗರಿಕುಲಾಲು ರಸ್ತೆ, ನೆಕ್ಕರಕಾಡು ಸೇತುವೆ ನಿರ್ಮಾಣಕ್ಕೆ ಕೋ. ರೂ. ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಶಿಲಾನ್ಯಾಸ ನೆರವೇರಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ