ವಿಟ್ಲ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ

www.bantwalnews.com

ವಿಟ್ಲ ಪೇಟೆಯ ಆಡಳಿತ, ಪೊಲೀಸ್ ಮತ್ತು ಜನಸಾಮಾನ್ಯರಿಗೆ ತಲೆನೋವಾಗಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಕೆಲವೊಂದು ನಿರ್ಧಾರಗಳನ್ನು ಪ್ರಕಟಿಸಲಾಗಿದೆ.

ಜಾಹೀರಾತು

 ಅಧ್ಯಕ್ಷ ಅರುಣ್ ವಿಟ್ಲ ಅಧ್ಯಕ್ಷತೆಯಲ್ಲಿ ವಿಟ್ಲ ಪ.ಪಂ. ಸಭಾಭವನದಲ್ಲಿ ಪ.ಪಂ.ಆಡಳಿತ ಮತ್ತು ಪೊಲೀಸ್ ಠಾಣಾಧಿಕಾರಿಗಳ ಸಮ್ಮುಖ ರಿಕ್ಷಾ, ಕಾರು, ಬಸ್ ಸಂಬಂಧಪಟ್ಟ ವಿವಿಧ ಸಂಘಟನೆಗಳ ಸಭೆ ನಡೆಯಿತು.ವಿಟ್ಲ ಠಾಣಾಧಿಕಾರಿ ನಾಗರಾಜ್, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ವಿ.ರಾಮದಾಸ ಶೆಣೈ, ಮುಖ್ಯಾಧಿಕಾರಿ ಮಾಲಿನಿ ಉಪಸ್ಥಿತರಿದ್ದರು. ಸಂಘಟನೆ ಪ್ರಮುಖರು ಮತ್ತು ವ್ಯಾಪಾರಿಗಳು ಭಾಗವಹಿಸಿ ಅಭಿಪ್ರಾಯಗಳನ್ನು ತಿಳಿಸಿದರು.

Jpeg

ಸಭೆಯ ಮುಖ್ಯಾಂಶಗಳು ಇವು.

  • ವಿಟ್ಲ-ಪುತ್ತೂರು ರಸ್ತೆಯ ಬಲಬದಿಯಲ್ಲಿ ಯಾವುದೇ ವಾಹನಗಳನ್ನು ನಿಲ್ಲಿಸಬಾರದು.
  • ವಿಟ್ಲ ಸಾಲೆತ್ತೂರು ರಸ್ತೆಯ ಬೆನಕ ಕ್ಲಿನಿಕ್ ಆಸ್ಪತ್ರೆ ತನಕ ಯಾವುದೇ ವಾಹನ ನಿಲ್ಲಿಸಬಾರದು.
  • ವಿಟ್ಲ ಮಂಗಳೂರು ರಸ್ತೆಯ ಪಂಚಲಿಂಗೇಶ್ವರ ದೇವಸ್ಥಾನದ ಹಿಂಬದಿಯ ವರೆಗೆ ಹಾಗೂ ಕಾಸರಗೋಡು ರಸ್ತೆಯ ವಿಜಯಲಕ್ಷ್ಮೀ ಟ್ರೇಡರ್‍ಸ್ ಅಂಗಡಿ ವರೆಗೆ ವಾಹನ ನಿಲುಗಡೆಗೆ ಅವಕಾಶವಿಲ್ಲ.
  • ವಿಟ್ಲ ಪುತ್ತೂರು ರಸ್ತೆಯ ಹೊಸ ಬಸ್ ನಿಲ್ದಾಣದ ಬಳಿಯ ಎಡಬದಿಗೆ ಪಾರ್ಕಿಂಗ್ ಮಾಡಬೇಕು.
  • ವಿಟ್ಲ ಸಾಲೆತ್ತೂರು ರಸ್ತೆಯ ಸಮಾಜ ಸೇವಾ ಬ್ಯಾಂಕ್ ಬಳಿ ಬಸ್ ಮತ್ತು ರಿಕ್ಷಾಗಳಿಗೆ ನಿಲ್ಲಲು ಮಾತ್ರ ಅವಕಾಶ.
  • ವಿಟ್ಲ ಮಂಗಳೂರು ರಸ್ತೆಯ ಲಯನ್ಸ್ ಬಸ್ ನಿಲ್ದಾಣದ ಬಳಿ ಬಸ್‌ಗಳು ನಿಲ್ಲಿಸಬೇಕು.
  • ಅಂತರ್‌ರಾಜ್ಯ ಹಾಗೂ ಖಾಸಗಿ ಬಸ್, ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪುತ್ತೂರು ರಸ್ತೆಯ ಸ್ಟೈಲ್ ಪಾರ್ಕ್ ಬಳಿ ನಿಲ್ಲಲು ಅವಕಾಶ
  •  ಹಳೆ ಬಸ್ ನಿಲ್ದಾಣದಲ್ಲಿ ಬಸ್‌ಗಳಿಗೆ ನಿಲ್ಲಲು 15 ನಿಮಿಷಗಳ ಕಾಲಾವಕಾಶ ನೀಡಲಾಗಿದೆ. ಹಳೆ ಬಸ್ ನಿಲ್ದಾಣದೊಳಗೆ ೫ ಕಾರುಗಳಿಗೆ ಮಾತ್ರ ನಿಲ್ಲಿಸಲು ಅವಕಾಶ .
  • ಹಳೆ ಬಸ್ ನಿಲ್ದಾಣದಲ್ಲಿ ರಿಕ್ಷಾಗಳಿಗೆ 2 ಸಾಲಿನಲ್ಲಿ ನಿಲ್ಲಲು ಅವಕಾಶ .
  • ಏಕಮುಖ ರಸ್ತೆಯಾದ ಪಂಚಲಿಂಗೇಶ್ವರ ದೇವಸ್ಥಾನ ರಸ್ತೆಯಲ್ಲಿ 2 ರಿಕ್ಷಾಗಳಿಗೆ ನಿಲ್ಲಲು ತಾತ್ಕಾಲಿಕ ಅವಕಾಶ.
  • ಪೇಟೆಯ ಒಳಗಡೆ ಕರ್ಕಶ ಹಾರ್ನ್‌ಗಳನ್ನು ಬಳಸಬಾರದು
  • . ಪುರಭವನದ ರಸ್ತೆಯಲ್ಲಿ ಸಂತೆಯ ದಿನ ಹೊರತುಪಡಿಸಿ ಉಳಿದ ದಿನ ಬಲಭಾಗದಲ್ಲಿ ಪಾರ್ಕಿಂಗ್ ಮಾಡುವುದು.
  • ಈ ಎಲ್ಲಾ ಕಾನೂನುಗಳು ನ.4ರಿಂದ 10 ದಿನಗಳೊಳಗೆ ಜಾರಿಗೆ ಬರಲಿದೆ.
  • ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಟ್ಲ ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*