ಜಿಲ್ಲಾ ಸುದ್ದಿ

ಯೋಧಗೆ ಹಾವು ಕಡಿತ, ಚಿಕಿತ್ಸೆಗೆ ನೆರವಾದ ಸಚಿವ ಖಾದರ್

www.bantwalnews.com

ಜಾಹೀರಾತು
ಹಾವು ಕಡಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿ, ತುರ್ತು ಚಿಕಿತ್ಸೆ ಒದಗಿಸುವಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ಯಶಸ್ವಿಯಾಗಿದ್ದಾರೆ.
ಭಾನುವಾರ ಮಧ್ಯರಾತ್ರಿ 1.15 ಗಂಟೆಗೆ ಮುಡಿಪು ಕೋಡಕಲ್ಲು ಎಂಬಲ್ಲಿನ ನಿವಾಸಿ ಸಂತೋಷ್ ಕುಮಾರ್ ಎಂಬವರ ತಮ್ಮ ಸಚಿವರ ಮೊಬೈಲ್‍ಗೆ ಕರೆ ಮಾಡಿ ತನ್ನ ಅಣ್ಣ ಸಂತೋಷ್‍ಗೆ ರಾತ್ರಿ ಹಾವು ಕಡಿದಿದ್ದು, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ 10 ಇಂಜಕ್ಷನ್‍ಗಳ ಅಗತ್ಯವಿದೆ ಎಂದು ತಿಳಿಸಿದ್ದರು. ಈ ಸಂದರ್ಭದಲ್ಲಿ ಅಸಹಾಯಕರಾದ ಸಂತೋಷ್ ಕುಟುಂಬಸ್ಥರು ರಾತ್ರಿ 1.15 ಗಂಟೆಗೆ ನೇರವಾಗಿ ಸಚಿವ ಯು.ಟಿ. ಖಾದರ್ ಅವರಿಗೆ ಕರೆ ಮಾಡಿದ್ದರು. ವಿಷಯ ತಿಳಿದು ಸಚಿವರು ತಕ್ಷಣವೇ ರಾತ್ರಿ 1.30 ಗಂಟೆಗೆ ಆಸ್ಪತ್ರೆಗೆ ಧಾವಿಸಿ ಬಂದರು.
ತುರ್ತುಚಿಕಿತ್ಸೆ ವಾರ್ಡ್‍ನಲ್ಲಿದ್ದ ರೋಗಿಯನ್ನು ಭೇಟಿಯಾದ ಸಚಿವರು, ವೈದ್ಯರೊಂದಿಗೆ ಸಮಾಲೋಚಿಸಿದ್ದು, ಆತನಿಗೆ ತುರ್ತಾಗಿ 10 ಚುಚ್ಚುಮದ್ದು ಕೊಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೂಡಲೇ ಸಚಿವರು ವೆನ್‍ಲಾಕ್ ಆಸ್ಪತ್ರೆಯಿಂದ ಚುಚ್ಚುಮದ್ದು ತರಿಸುವ ಏರ್ಪಾಡು ಮಾಡಿದರು. ಇದೀಗ ಸಂತೋಷ್ ಕುಮಾರ್ ಚೇತರಿಸಿಕೊಳ್ಳುತ್ತಿದ್ದಾರೆ.
ಸೋಮವಾರ ಬೆಳಿಗ್ಗೆಯೂ ಸಚಿವರು ಆಸ್ಪತ್ರೆಗೆ ಭೇಟಿ ನೀಡಿ, ಸಂತೋಷ್ ಆರೋಗ್ಯ ಸ್ಥಿತಿ ವಿಚಾರಿಸಿದರು. ಸಂತೋಷ್ ಕುಮಾರ್ ಭಾರತೀಯ ಸೇನೆಯ ಯೋಧರಾಗಿದ್ದು, ಕಳೆದ ವರ್ಷ ಕಾಶ್ಮೀರದಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಸರ್ಜಿಕಲ್ ಸ್ಟ್ರೈಕ್‍ನಲ್ಲಿ ಪಾಲ್ಗೊಂಡಿದ್ದರು. ಕೌಟುಂಬಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಮುಡಿಪು ಕೊಡಕಲ್ಲಿಗೆ ಆಗಮಿಸಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ