ಯಕ್ಷಗಾನ

ಗುರುವಂದನೆ-ರಂಗಪ್ರವೇಶೋತ್ಸವ

www.bantwalnews.com

ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ  ಪಡ್ರೆಚಂದು ಸ್ಮಾರಕ ಕೇಂದ್ರ ಕರಾವಳಿಯ ಹೆಮ್ಮೆಯ ಕೇಂದ್ರವಾಗಿ ಗುರುತಿಸಿಕೊಂಡಿದೆ. ಪ್ರತಿಯೊಬ್ಬ ಕಲಾಪ್ರೇಮಿಗಳ ಸಹಕಾರದಿಂದ ಕೇಂದ್ರವನ್ನು ಇನ್ನಷ್ಟು ಬೆಳೆಸುವ ನಿಟ್ಟಿನ ಕಾರ್ಯಯೋಜನೆ ಅಗತ್ಯವಿದೆ ಎಂದು ಹಿರಿಯ ಕಲಾಪೋಷಕ ಡಾ. ಎಸ್.ಎನ್ ಭಟ್ ಅಭಿಪ್ರಾಯ ವ್ಯಕ್ತಪಡಿಸಿದರು.

ಜಾಹೀರಾತು

ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರದ ವತಿಯಿಂದ ಯಕ್ಷಗಾನ ಕೇಂದ್ರದಲ್ಲಿ ತರಬೇತಿ ಪಡೆದು ಮೇಳಕ್ಕೆ ಸೇರ್ಪಡೆಗೊಳ್ಳುವ ವಿದ್ಯಾಥರ್ಿಗಳ ಗುರುವಂದನೆ ಹಾಗೂ ರಂಗಪ್ರವೇಶೋತ್ಸವ ಕಾರ್ಯಕ್ರಮವನ್ನು ಪೆರ್ಲ ಸತ್ಯನಾರಾಯಣ ಮಂದಿರದಲ್ಲಿ ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

ಸಮಗ್ರ ಕಲಾಕ್ಷೇತ್ರದ ಬೆಳವಣಿಗೆಗೆ ಪಡ್ರೆಚಂದು ಸ್ಮಾರಕ ಕೇಂದ್ರ ಉತ್ತಮ ನಿದರ್ಶನವಾಗಿದ್ದು, ಪಾರಂಪರಿಕ ಅಧ್ಯಯನಕ್ಕೆ ಒತ್ತು ನೀಡುತ್ತಿರುವುದು ಸ್ತುತ್ಯರ್ಹವೆಂದು ಅವರು ತಿಳಿಸಿದರು. ಸಮಾನ ಮನಸ್ಕರ ಸಹಭಾಗಿತ್ವದಿಂದಷ್ಟೆ ಇಂತಹ ಕೇಂದ್ರಗಳನ್ನು ಮುನ್ನಡೆಸಬಹುದಾಗಿದ್ದು, ಈ ನಿಟ್ಟಿನ ಗಂಭೀರ ಚಿಂತನೆಗಳಾಗಬೇಕೆಮದು ಅಭಿಪ್ರಾಯ ವ್ಯಕ್ತಪಡಿಸಿದರು.

ಪೆರ್ಲ ಶ್ರೀ ಸತ್ಯನಾರಾಯಣ ಹೈಸ್ಕೂಲ್ ಪ್ರಬಂಧಕ ಶ್ರೀಕೃಷ್ಣ ವಿಶ್ವಾಮಿತ್ರ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಸ.ನಾ ಹೈಸ್ಕೂಲ್ ಮುಖ್ಯ ಶಿಕ್ಷಕ ಬಿ.ರಾಜೇಂದ್ರ, ಶ್ರೀ ಸ.ನಾ ಹೈಸ್ಕೂಲ್ನ ಅಧ್ಯಾಪಕರು ಮತ್ತು ಭಾಗವತರಾದ ಸತೀಶ್ ಪುಣಿಂಚಿತ್ತಾಯ,.ಶ್ರೀಧರ ಪಂಜಾಜೆ ಉಪಸ್ಥಿತರಿದ್ದು ಶುಭಹಾರೈಸಿದರು.

ಸಭೆಯಲ್ಲಿ ಕೇಂದ್ರದ ನಿದರ್ೇಶಕ, ಯಕ್ಷಗಾನ ಗುರು ಸಬ್ಬಣಕೋಡಿ ರಾಮ ಭಟ್ ರವರನ್ನು ಗೌರವಿಸಲಾಯಿತು. ರಾಮ ಭಟ್ ಸಬ್ಬಣಕೋಡಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ವಂದಿಸಿದರು. ಉದಯಶಂಕರ ಅಮೈ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವೀರವೈಷ್ಣವ ಎಂಬ ಪೌರಾಣಿಕ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.