ಭಾನುವಾರ ಲಯನ್ಸ್ ಯಕ್ಷ ಸಂಭ್ರಮ, ಸನ್ಮಾನ, ತಾಳಮದ್ದಳೆ

www.bantwalnews.com

ಅಂತಾರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ವತಿಯಿಂದ ಲಯನ್ಸ್ ಯಕ್ಷ ಸಂಭ್ರಮ ಕಾರ್ಯಕ್ರಮ ನ.12ರಂದು ಸಂಜೆ ೪ಗಂಟೆಗೆ ಬಿ.ಸಿ.ರೋಡಿನ ರಂಗೋಲಿ ಹೊಟೇಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಲಯನ್ಸ್ ಯಕ್ಷಗಾನ ಜಿಲ್ಲಾ ಸಂಯೋಜಕ ಬಿ.ಸಂಜೀವ ಶೆಟ್ಟಿ ಹೇಳಿದ್ದಾರೆ.

ಜಾಹೀರಾತು

ಬಿ.ಸಿ.ರೋಡ್‌ನ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಮಾತನಾಡಿದ ಅವರು, ಲಯನ್ಸ್ ಜಿಲ್ಲಾ ಪ್ರಥಮ ಉಪರಾಜ್ಯಪಾಲ ಕೆ.ದೇವದಾಸ್ ಭಂಡಾರಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.
ಸಭಾ ಕಲಾಪದ ನಂತರ ಕರ್ಣಾಜುನ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. 

ಭಾಗವತರಾಗಿ ಗಿರೀಶ್ ರೈ ಕಕ್ಯಪದವು, ಚೆಂಡೆ ಮದ್ದಳೆಯಲ್ಲಿ ಪ್ರಕಾಶ್ ವಿಟ್ಲ, ವಿನಯ ಆಚಾರ್ಯ ಕಡಬ, ಅರ್ಥಧಾರಿಗಳಾಗಿ ಶಂಭು ಶರ್ಮ ವಿಟ್ಲ, ಉಜಿರೆ ಅಶೋಕ ಭಟ್, ರಾಧಾಕೃಷ್ಣ ಕಲ್ಚಾರ್, ಗಣೇಶ ಶೆಟ್ಟಿ ಕನ್ನಡಿಕಟ್ಟೆ, ಸಂಜೀವ ಶೆಟ್ಟಿ ಭಾಗವಹಿಸುವರು.

ಕೀರ್ತಿಶೇಷ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಗುವುದು. ಎಲ್‌ಐಸಿಯ ನಿವೃತ್ತ ಅಧಿಕಾರಿ ಎನ್.ಎಸ್. ಹೆಗ್ಡೆ ಹಾಗೂ ಯಕ್ಷಗಾನ ಕಲಾವಿದ ಧನಂಜಯ ಪೊಳಲಿ ಅವರನ್ನು ಇದೇ ವೇಳೆ ಸನ್ಮಾನಿಸಲಾಗುವುದು ಎಂದು ಹೇಳಿದರು.

ಜಾಹೀರಾತು

ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಕ್ಲಬ್‌ನ ಬಂಟ್ವಾಳ ಘಟಕದ ಅಧ್ಯಕ್ಷ ಜಗದೀಶ ಯಡಪಡಿತ್ತಾಯ, ಯಕ್ಷಗಾನಕ್ಕೆ ಸಂಬಂಧಿಸಿ ಲಯನ್ಸ್ ಜಿಲ್ಲಾ ಚೇಯರ ಪರ್ಸನ್ ಎಂ.ಸುಂದರ ಶೆಟ್ಟಿ, ಲಯನ್ಸ್ ವಲಯಾಧ್ಯಕ್ಷ ಶಿವಾನಂದ ಬಾಳಿಗಾ, ಪುಷ್ಪರಾಜ ಶೆಟ್ಟಿ, ಜಯಂತ ಶೆಟ್ಟಿ, ಸತ್ಯನಾರಾಯಣ ರಾವ್, ಮಧ್ವರಾಜ್ ಕಲ್ಮಾಡಿ ಉಪಸ್ಥಿತರಿದ್ದರು.

VIDEO REPORT:

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಭಾನುವಾರ ಲಯನ್ಸ್ ಯಕ್ಷ ಸಂಭ್ರಮ, ಸನ್ಮಾನ, ತಾಳಮದ್ದಳೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*