ಬಂಟ್ವಾಳ

ಸಮಾವೇಶಕ್ಕೆ ಅಂತಿಮ ಹಂತದ ಸಿದ್ಧತೆ

  • ಪ್ರಮುಖ ನಾಯಕರು ಆಗಮಿಸುವ ನಿರೀಕ್ಷೆ

ಬಂಟ್ವಾಳನ್ಯೂಸ್ ವರದಿ

ನವ ಕರ್ನಾಟಕ ನಿರ್ಮಾಣಕ್ಕಾಗಿ ಬಿಜೆಪಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆಸುತ್ತಿರುವ ನವಕರ್ನಾಟಕ ಪರಿವರ್ತನಾ ಯಾತ್ರೆ ಬಂಟ್ವಾಳ ಕ್ಷೇತ್ರಕ್ಕೆ ಶನಿವಾರ ಬೆಳಗ್ಗೆ 9 ಗಂಟೆಗೆ ಆಗಮಿಸಲಿದೆ. ಪುಂಜಾಲಕಟ್ಟೆಯಿಂದ ಬಂಟ್ವಾಳ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಇರುವ ಮೈದಾನದಲ್ಲಿ ಬೆಳಗ್ಗೆ ಸುಮಾರು 11ರ ವೇಳೆ ಸಮಾವೇಶ ನಡೆಯುವುದು.

ಜಾಹೀರಾತು

ಜಾಹೀರಾತು

ನವಕರ್ನಾಟಕ ಪರಿವರ್ತನಾ ಯಾತ್ರೆಯ ಬಂಟ್ವಾಳದಲ್ಲಿ ನಾಳೆ ನಡೆಯಲಿರುವ ಸಮಾವೇಶದಲ್ಲಿ ಉಟೋಪಚಾರ ವ್ಯವಸ್ಥೆಗೆ ಉಗ್ರಾಣ ಮುಹೂರ್ತವನ್ನು ಬಂಟ್ವಾಳ ಬಿಜೆಪಿ ಮುಖಂಡರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ನೆರವೇರಿಸಿದರು.

ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅಥವಾ ಪಕ್ಷದ ಪ್ರಮುಖ ನಾಯಕರು ಯಡಿಯೂರಪ್ಪ ಜೊತೆ ಆಗಮಿಸುವ ನಿರೀಕ್ಷೆ ಇದ್ದು, ಕಾರ್ಯಕರ್ತರು ಈಗಾಗಲೇ ಸಮಾವೇಶ ನಡೆಯುವ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಇರುವ ವಿಶಾಲವಾದ ಮೈದಾನದಲ್ಲಿ ಸಮಾವೇಶಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ಬಂಟ್ವಾಳ ಕ್ಷೇತ್ರದ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಬೃಹತ್ ವೇದಿಕೆ , ಚಪ್ಪರದ ವ್ಯವಸ್ಥೆ ಸಹಿತ ಸಕಲ ಸಿದ್ಧತೆಗಳು ನಡೆದಿವೆ.

ಬೆಳ್ತಂಗಡಿಯಿಂದ ಬಂಟ್ವಾಳಕ್ಕಾಗಮಿಸುವ ಯಾತ್ರೆಯನ್ನು ಪುಂಜಾಲಕಟ್ಟೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ.

ಜಾಹೀರಾತು

ಯಾತ್ರೆಯು ವಗ್ಗ ಮಾರ್ಗವಾಗಿ ಬಂಟ್ವಾಳ ನಗರದ ಮೂಲಕ ಬಿ.ಸಿ.ರೋಡಿನ ಸಮಾವೇಶ ಮೈದಾನದಲ್ಲಿ ಸಂಪನ್ನಗೊಳ್ಳಲಿದೆ.

FORE DETAILS READ:

ಜಾಹೀರಾತು

AND

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ