ಕಲ್ಲಡ್ಕ

ಶಿಕ್ಷಕರ ಮಕ್ಕಳು ಯಾಕೆ ಸರಕಾರಿ ಶಾಲೆಗಳಲ್ಲಿ ಕಲಿಯೋದಿಲ್ಲ?

www.bantwalnews.com

ನೀವು ಸರಕಾರಿ ಶಾಲೆ ಉಳೀಬೇಕು ಅಂತೀರಿ, ಆದರೆ ನಿಮ್ಮ ಮಕ್ಕಳೇ ಸರಕಾರಿ ಶಾಲೆಗೆ ಹೋಗೋದಿಲ್ಲ ಯಾಕೆ, ಸರಕಾರಿ ಶಾಲೆಗಳು ಉಳಿಯಬೇಕಾದರೆ ಶಿಕ್ಷಕರ ಮಕ್ಕಳು ಸರಕಾರಿ ಶಾಲೆಗಳಲ್ಲಿ ಕಲಿಯುವಂತಾಗಬೇಕು ಎಂದು ವಿದ್ಯಾರ್ಥಿಗಳು ನೇರಳಕಟ್ಟೆ ಮಕ್ಕಳ ಗ್ರಾಮಸಭೆಯಲ್ಲಿ ಆಗ್ರಹಿಸಿದರು.

ಜಾಹೀರಾತು


ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ನೇರಳಕಟ್ಟೆ ಶಾಲೆಯಲ್ಲಿ ನಡೆದ ೨೦೧೭-೧೮ನೇ ಸಾಲಿನ ಮಕ್ಕಳ ಗ್ರಾಮಸಭೆಯಲ್ಲಿ ಶಿಕ್ಷಣ ಇಲಾಖಾ ಮಾಹಿತಿ ನೀಡಿದ ಸಿಆರ್‌ಪಿ ಸುಧಾಕರ್ ಭಟ್ ಅವರು ಸರಕಾರಿ ಕನ್ನಡ ಶಾಲೆಗಳನ್ನು ಉಳಿಸಲು ವಿದ್ಯಾರ್ಥಿಗಳು ಮುಂದಾಗಬೇಕು. ತಮ್ಮ ನೆರೆ ಹೊರೆಯ ಮಕ್ಕಳನ್ನು ಸರಕಾರಿ ಶಾಲೆಗೆ ಬರುವಂತೆ ಪ್ರೇರೇಪಿಸಬೇಕು ಎಂದಾದ ಒಕ್ಕೊರಳಿನಿಂದ ಪ್ರತಿಕ್ರಯಿಸಿದ ವಿದ್ಯಾರ್ಥಿಗಳು ಶಿಕ್ಷಕರ ಮಕ್ಕಳು ಸರಕಾರಿ ಶಾಲೆಗೆ ಬರಬೇಕು ಎಂದು ಆಗ್ರಹಿಸಿ ಸಭೆಯ ಗಮನ ಸೆಳೆದರು. ಶೌಚಾಲಯದ ಬಾಗಿಲು, ನಳ್ಳಿಗಳನ್ನು ದುರಸ್ತಿಪಡಿಸುವಂತೆ ಇದೇ ವೇಳೆ ವಿದ್ಯಾರ್ಥಿಗಳು ಆಗ್ರಹಿಸಿದರು.

ನೇರಳಕಟ್ಟೆ ಶಾಲಾ ೮ನೇ ತರಗತಿ ವಿದ್ಯಾರ್ಥಿನಿ ಸಿಹಾನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯಮಂತ್ರಿ ಸಂದೇಶ್ ಏಮಾಜೆ, ಶಾಲಾ ವಿದ್ಯಾರ್ಥಿನಿ ಚೈತನ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನೆಟ್ಲಮುಡ್ನೂರು ಗ್ರಾ ಪಂ ಉಪಾಧ್ಯಕ್ಷೆ ರೇವತಿ, ಸದಸ್ಯರುಗಳಾದ ಕೆ ಶ್ರೀಧರ ರೈ ಕುರ್ಲೆತ್ತಿಮಾರು, ಲತೀಫ್ ನೇರಳಕಟ್ಟೆ, ಡಿ ತನಿಯಪ್ಪ ಗೌಡ, ಶಶಿಕಲಾ, ಶಿಕ್ಷಕಿ ಗೀತಾ ಉಪಸ್ಥಿತರಿದ್ದರು.

ಕಿರಿಯ ಆರೋಗ್ಯ ಸಹಾಯಕಿ ಪವಿತ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸೋಮಕ್ಕ ಇಲಾಖಾ ಮಾಹಿತಿ ನೀಡಿದರು. ಗ್ರಾ ಪಂ ಅಭಿವೃದ್ದಿ ಅಧಿಕಾರಿ ಮರಿಯಮ್ಮ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

10 hours ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

2 days ago