ಪುತ್ತೂರಿನಲ್ಲಿ ನ.17ರಿಂದ ಚಲನಚಿತ್ರ ಸಪ್ತಾಹ

www.bantwalnews.com

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಮತ್ತು ರಾಷ್ಟ್ರ ಅಂತರರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರಗಳ ಪ್ರದರ್ಶನದ ಅಂಗವಾಗಿ ಚಲನಚಿತ್ರ ಸಪ್ತಾಹವನ್ನು ನವೆಂಬರ್ 17 ರಿಂದ 23 ರವರೆಗೆ ಪ್ರತೀದಿನ ಬೆಳಿಗ್ಗೆ 9ಗಂಟೆಗೆ ಪುತ್ತೂರಿನ ಅರುಣ ಚಿತ್ರಮಂದಿರದಲ್ಲಿ ಏರ್ಪಡಿಸಲಾಗಿದೆ.
 ಚಲನಚಿತ್ರ ಸಪ್ತಾಹದಲ್ಲಿ ನವೆಂಬರ್ 17 ರಂದು ರಾಜ್ಯ ಪ್ರಶಸ್ತಿ ವಿಜೇತ ಚಿತ್ರ ‘ಅಮರಾವತಿ’, ನವೆಂಬರ್ 18 ರಂದು ರಾಜ್ಯ ಪ್ರಶಸ್ತಿ ವಿಜೇತ  ಚಲನಚಿತ್ರ ‘ಕಿರಿಕ್ ಪಾರ್ಟಿ’, ನವೆಂಬರ್ 19 ರಂದು ರಾಜ್ಯ ಪ್ರಶಸ್ತಿ ವಿಜೇತ  ಚಲನಚಿತ್ರ ‘ರಾಮ ರಾಮ ರೇ’,  ನವೆಂಬರ್ 20 ರಂದು ರಾಜ್ಯ ಪ್ರಶಸ್ತಿ ವಿಜೇತ  ತುಳು ಚಲನಚಿತ್ರ  ‘ಮದಿಪು’, ನವೆಂಬರ್ 21 ರಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ  ಚಲನಚಿತ್ರ ‘ಯೂಟರ್ನ್’, ನವೆಂಬರ್ 22 ರಂದು ರಾಜ್ಯ ಪ್ರಶಸ್ತಿ ವಿಜೇತ  ಚಲನಚಿತ್ರ ‘ಅಲ್ಲಮ’,  ನವೆಂಬರ್ 23 ರಂದು ರಾಜ್ಯ ಪ್ರಶಸ್ತಿ ವಿಜೇತ  ಚಲನಚಿತ್ರ, ‘ಮಾರಿಕೊಂಡವರು’ ಪ್ರದರ್ಶನಗೊಳ್ಳಲಿದೆ.
ಚಲನಚಿತ್ರ ಸಪ್ತಾಹವನ್ನು ನವೆಂಬರ್ 17 ರಂದು ಬೆಳಿಗ್ಗೆ 9 ಗಂಟೆಗೆ ಪುತ್ತೂರು ನಗರಸಭೆ ಅಧ್ಯಕ್ಷೆ ಜಯಂತಿ ಬಲ್ನಾಡ್ ಚಲನಚಿತ್ರ ಸಪ್ತಾಹ ಉದ್ಘಾಟಿಸುವರು.  ಚಿತ್ರ ಪ್ರದರ್ಶನಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪುತ್ತೂರಿನಲ್ಲಿ ನ.17ರಿಂದ ಚಲನಚಿತ್ರ ಸಪ್ತಾಹ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*