ಬಂಟ್ವಾಳ

ಬಂಟ್ವಾಳ ತಾಲೂಕಿನ ಕ್ಲಿನಿಕ್‌ಗಳು ಬಂದ್

www.bantwalnews.com ವರದಿ

ವೈದ್ಯವೃತ್ತಿಗೆ ಸಂಬಂಧಿಸಿ ರಾಜ್ಯ ಸರಕಾರ ತರಲಿರುವ ಮಸೂದೆಯನ್ನು ವಿರೋಧಿಸಿ ಇಂಡಿಯನ್ ಮೆಡಿಕಲ್ ಎಸೋಸಿಯೇಶನ್ ವೈದ್ಯರು ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬಂಟ್ವಾಳ ತಾಲೂಕಿನಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.

ಜಾಹೀರಾತು

ಸಾಮಾನ್ಯವಾಗಿ ಈ ಅವಧಿಯಲ್ಲಿ ಮುಷ್ಕರ ಇಲ್ಲದೇ ಇದ್ದರೂ ಪೇಷಂಟ್ ಗಳ ಸಂಖ್ಯೆ ಕಡಿಮೆ. ಹೆರಿಗೆ ಮತ್ತು ತುರ್ತುಸಂದರ್ಭದ ಪ್ರಕರಣಗಳನ್ನು ಬಿಟ್ಟರೆ ಅಪಾಯಕಾರಿಯಾದ ಸನ್ನಿವೇಶಗಳು ಇಲ್ಲಿ ನಿರ್ಮಾಣವಾಗಿಲ್ಲ. ಆದರೆ ಚಾರಿಟೇಬಲ್ ಆಸ್ಪತ್ರೆ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿಲ್ಲವಾದ ಕಾರಣ ತಾಲೂಕಿನ ಏಕೈಕ ಚಾರಿಟೇಬಲ್ ಆಸ್ಪತ್ರೆ ತುಂಬೆ ಆಸ್ಪತ್ರೆಯಲ್ಲಿ ಎಂದಿಗಿಂತ ಹೆಚ್ಚು ರೋಗಿಗಳು ಕಂಡುಬಂದರು.

ಐಎಂಎ ಬೆಂಬಲಿಸಿ ಆಯುಷ್, ಡೆಂಟಲ್, ಹೋಮಿಯೋಪಥಿ ವೈದ್ಯರೂ ಮುಷ್ಕರ ಹೂಡಿದ್ದು, ತಾಲೂಕಿನಲ್ಲಿರುವ ಕ್ಲಿನಿಕ್ ಗಳು ಬಂದ್ ಆಚರಿಸಿದವು. ಮುಷ್ಕರ ಇಲ್ಲದಿದ್ದರೂ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕಿನ ರೋಗಿಗಳು ಮಂಗಳೂರು ಮತ್ತು ದೇರಳಕಟ್ಟೆಯನ್ನು ಅವಲಂಬಿಸುತ್ತಾರೆ. ಹೀಗಾಗಿ ತಾಲೂಕಿನಲ್ಲಿ ಮುಷ್ಕರಕ್ಕೆ ಸಂಬಂಧಿಸಿ ಗಂಭೀರ ಪರಿಣಾಮಗಳು ಉಂಟಾಗಿಲ್ಲ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

18 minutes ago